ಸ್ವಾತಂತ್ರ್ಯ ಸಂಭ್ರದಲ್ಲಿದ್ದ ಸಿಲಿಕಾನ್ ಸಿಟಿಗೆ ವರುಣನ ಶಾಕ್: ಜನಜೀವನ ಅಸ್ತವಸ್ತ 
ರಾಜ್ಯ

ಸ್ವಾತಂತ್ರ್ಯ ಸಂಭ್ರಮದಲ್ಲಿದ್ದ ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ

71ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದ್ದ ಸಿಲಿಕಾನ್ ಸಿಟಿಯ ಜನರಿಗೆ ವರುಣ ದೊಡ್ಡ ಶಾಕ್'ನ್ನು ನೀಡಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವಸ್ತಗೊಂಡಿದೆ...

ಬೆಂಗಳೂರು: 71ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದ್ದ ಸಿಲಿಕಾನ್ ಸಿಟಿಯ ಜನರಿಗೆ ವರುಣ ದೊಡ್ಡ ಶಾಕ್'ನ್ನು ನೀಡಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವಸ್ತಗೊಂಡಿದೆ. 

ರಾತ್ರಿಯಿಡೀ ಗುಡುಗು ಸಹಿತ ಸುರಿದ ಭಾರೀ ಮಳೆಯಿಂದಾಗಿ ಮಾಣಿಕ್ ಷಾ ಪರೇಡ್ ಮೈದಾನ ಮಳೆಯಿಂದಾಗಿ ಕೆಲಸು ಗದ್ದೆಯಂತಾಗಿತ್ತು. ಪಥಸಂಚನಕ್ಕಾಗಿ ಮಾಡಿದ್ದ ಮಾರ್ಕಿಂಗ್ ಗಳು, ಧ್ವಜಾರೋಹಣದ ಸಿದ್ಧತೆಗಳು ಹಾಳಾಗಿ ಸಮಸ್ಯೆಗಳು ಎದುರಾಗುವಂತಾಗಿತ್ತು. 

ಶಾಂತಿನಗರ, ವಿಲ್ಸನ್ ಗಾರ್ಡನ್, ಡೈರಿಸರ್ಕಲ್, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಮೈಸೂರುರಸ್ತೆ, ಬೊಮ್ಮನಹಳ್ಳಿ, ಸಿಲ್ಕ್ ಬೋರ್ಡ್ ನಲ್ಲಿ ಧಾರಾಕಾರ ಮಳೆ ಸುರಿದಿದೆ. ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ ಹೆದ್ದಾರಿ ಹೊಳೆಯಂತೆ ತುಂಬಿಕೊಂಡಿದೆ. 

ಎಲೆಕ್ಟ್ರಾನಿಕ್ ಸಿಟಿ ಸಿಗ್ನಲ್ ಬಳಿ ವಾಹನಗಳೊಳಗೇ ನೀರು ನುಗ್ಗಿ ನಡುರಸ್ತೆಯಲ್ಲಿಟೇ ವಾಹನಗಳು ಕೆಟ್ಟಿ ನಿಂತಿತ್ತು. ಇದರಿಂದಾಗಿ ಸಂಚಾರಕ್ಕೆ ಭಾರೀ ಸಮಸ್ಯೆಗಳು ಎದುರಾಗಿತ್ತು. ಏಕಾಏಕಿ ಸುರಿದ ಭಾರೀ ಮಳೆಯಿಂದಾಗಿ ನಗರದ ಜನತೆ ಪರದಾಡುವಂತಾಗಿತ್ತು. ತಗ್ಗು ಪ್ರದೇಶಗಳಲ್ಲಿ ವಾಸವಾಗಿರುವ ಜನರ ನಿದ್ದೆಯನ್ನೂ ಮಳೆರಾಯ ಹಾಳು ಮಾಡಿದ್ದ. ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ ನೀರನ್ನು ಹೊರ ಹಾಕುವಲ್ಲಿ ಜನರು ನಿರತರಾಗಿದ್ದರು. 

ಮಳೆರಾಯನ ಅಬ್ಬರದಿಂದಾಗಿ ಅಸ್ತವಸ್ತವಾದ ಜನಜೀವನವನ್ನು ಕಂಡು ನಾಗರೀಕರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ದಿನ ಸುರಿದ ಮಳೆಯನ್ನೇ ಎದುರಿಸಲಾಗದ ಬೆಂಗಳೂರಿನಲ್ಲಿ ನಿರಂತರ ಮಳೆಯಾದರೆ ಜನರ ಸ್ಥಿತಿ ಏನಾಗಬಹುದು ಎಂದಿರುವ ಜನತೆ ಬಿಬಿಎಂಪಿ ಮೇಯರ್ ಹಾಗೂ ಸದಸ್ಯರುಗಳ ವಿರುದ್ಧ ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT