ಸಂಗ್ರಹ ಚಿತ್ರ 
ರಾಜ್ಯ

ಮಹಾಮಳೆ: 10 ವರ್ಷದಲ್ಲೇ ಬೆಂಗಳೂರಿನಲ್ಲಿ ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಮಳೆ ಕಳೆದ 10 ವರ್ಷಗಳಲ್ಲೇ ಆಗಸ್ಟ್ ತಿಂಗಳಲ್ಲಿ ಬಿದ್ದ ಅತೀ ಹೆಚ್ಚು ಮಳೆ ಎಂಬ ದಾಖಲೆ ಬರೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಮಳೆ ಕಳೆದ 10 ವರ್ಷಗಳಲ್ಲೇ ಆಗಸ್ಟ್ ತಿಂಗಳಲ್ಲಿ ಬಿದ್ದ ಅತೀ ಹೆಚ್ಚು ಮಳೆ ಎಂಬ ದಾಖಲೆ ಬರೆದಿದೆ.

ನಿನ್ನೆ ತಡರಾತ್ರಿ ಆರಂಭವಾದ ಗುಡುಗು ಸಹಿತ ಭಾರಿ ಮಳೆ ಸಿಲಿಕಾನ್ ಸಿಟಿಯಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಈ ಹತ್ತು ವರ್ಷದಲ್ಲೇ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆ ಇದಾಗಿದೆ. ಸೋಮವಾರ ರಾತ್ರಿ ಬೆಂಗಳೂರು  ನಗರದಲ್ಲಿ 13 ಸೆಂ.ಮೀ.(128.5 ಮಿ.ಮೀ) ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಮುಖ ವಿಚಾರವೆಂದರೆ ಎಚ್‌‌ಎಎಲ್‌ ಪ್ರದೇಶವೊಂದರಲ್ಲೇ ಬರೊಬ್ಬರಿ 14ಸೆಂ.ಮೀ (140 ಮಿ.ಮೀ) ಮಳೆಯಾಗಿದೆ.

ಸೋಮವಾರ ತಡ ರಾತ್ರಿ ಮಳೆ ಆರ್ಭಟಿಸಿದ್ದು, ಹಲವು ನಗರಗಳಲ್ಲಿ ಮಳೆ ನೀರು ವಸತಿ ಪ್ರದೇಶಕ್ಕೆ ನುಗ್ಗಿದೆ. ಒಂದೇ ರಾತ್ರಿಗೆ ಮಳೆ ಅವಾಂತರ ಸೃಷ್ಟಿಸಿದ್ದು, ತಡ ರಾತ್ರಿ ಗುಡುಗು, ಸಿಡಿಲಿನೊಂದಿಗೆ ಅಬ್ಬರಿಸಿದ ಮಳೆರಾಯ  ನಗರದ ವಿವಿಧ ಪ್ರದೇಶಗಳಲ್ಲಿ ಅವಾಂತರ ಸೃಷ್ಟಿ ಮಾಡಿದ್ದ. ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿದ್ದು, ಕಾರು, ಬೈಕ್‌ ಗಳು ಸೇರಿದಂತೆ ನೂರಾರು ವಾಹನಗಳು ನೀರಲ್ಲಿ ಅರ್ಧಕ್ಕೆ ಮುಳುಗಿವೆ.  ಕೋರಮಂಗಲ, ಸಿಲ್ಕ್‌ ಬೋರ್ಡ್‌ ರಸ್ತೆಗಳು ಜಲಾವೃತವಾಗಿವೆ. ಕೋರಮಂಗಲದಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದಿದೆ. ವರ್ತೂರು ರಸ್ತೆಯಲ್ಲೂ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ. ಎಚ್‌ಎಲ್‌ನ ಕಾಂಪೌಂಡ್‌ ಕಸಿದು  ಬಿದ್ದಿದೆ. ಎಚ್‌ ಎಲ್‌ನ ಹೆಲಿಕಾಪ್ಟರ್‌ ವಿಭಾಗದ ಕಾಂಪೌಂಡ್‌ ಕಸಿದು ಬಿದ್ದಿದೆ.

ಇನ್ನು 2009ರ ಆಗಸ್ಟ್ 17ರಂದು ಅತೀ ಹೆಚ್ಚು ಅಂದರೆ 7.6 ಸೆಂ.ಮೀ ನಷ್ಟು ಮಳೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?

ದಾವಣಗೆರೆ: ಕಂಠಪೂರ್ತಿ ಕುಡಿದು ಯುವತಿ ರಂಪಾಟ; PSI ಮೇಲೆ ಹಲ್ಲೆ, ವಿಡಿಯೋ ವೈರಲ್‌

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ