ರಾಜ್ಯ

ಗೋರಖ್ ಪುರ ದುರಂತ: ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ; ಅಮಿತ್ ಶಾ

Shilpa D
ಬೆಂಗಳೂರು: ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ 70 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡುವ ಪ್ರಶ್ನೆಯ್ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾ, ಭಾರತದಂತದ ದೊಡ್ಡ ದೇಶದಲ್ಲಿ ಇಂಥಹ ಘಟನೆಗಳು ಸಾಮಾನ್ಯ ಎಂದು ಹೇಳಿದ್ದಾರೆ.
ಈ ಹಿಂದೆಯೂ ಇಂಥ ಹಲವಾರು ಘಟನೆಗಳು ನಡೆದಿವೆ. ಇದೇ ಮೊದಲಲ್ಲ ಇಂಥ ಘಟನೆ ನಡೆದಿರುವುದು. ಕಾಂಗ್ರೆಸ್ ಗೆ ರಾಜಿನಾಮೆ ಕೇಳುವುದನ್ನು ಬಿಟ್ಟರೇ  ಬೇರೆ ಕೆಲಸವಿಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ. 
SCROLL FOR NEXT