ಡಿ.ಕೆ ಸುರೇಶ್ 
ರಾಜ್ಯ

ಸಂಸದ ಡಿ.ಕೆ ಸುರೇಶ್ ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ

ಸಂಸದ ಡಿ.ಕೆ.ಸುರೇಶ್‍ ಅವರ ಕಚೇರಿ ದೂರವಾಣಿಗೆ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ ಆರೋಪದಡಿ ಭೂಗತ ಪಾತಕಿ ರವಿಪೂಜಾರಿ ...

ಬೆಂಗಳೂರು: ಸಂಸದ ಡಿ.ಕೆ.ಸುರೇಶ್‍ ಅವರ ಕಚೇರಿ ದೂರವಾಣಿಗೆ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ ಆರೋಪದಡಿ ಭೂಗತ ಪಾತಕಿ ರವಿಪೂಜಾರಿ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಮೂರುದಿನಗಳ ಕಾಲ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ 7 ಗಂಟೆಗಳ ನಂತರ ವ್ಯಕ್ತಿಯೊಬ್ಬ ಸಚಿವರ ಸಹೋದರ ಸುರೇಶ್ ಅವರ ಕಚೇರಿಗೆ ಕರೆ ಮಾಡಿದ್ದಾನೆ. ಆ ಸಂದರ್ಭದಲ್ಲಿ ಸುರೇಶ್ ಕಚೇರಿಯಲ್ಲಿ ಇರಲಿಲ್ಲವಾದ್ದರಿಂದ ಅವರ ಸಹಾಯಕ ಅರುಣ್‌ದೇವ್ ಕರೆ ಸ್ವೀಕರಿಸಿದ್ದಾರೆ. ಹಿಂದಿಯಲ್ಲಿ ಮಾತನಾಡಿರುವ ಆರೋಪಿ, ‘ನಾನು ರವಿಪೂಜಾರಿ. ಹಣಕ್ಕಾಗಿ ಕರೆ ಮಾಡಿದ್ದೇನೆ’ ಎಂದಿದ್ದಾನೆ. 
ಕರೆ ಬಂದ ಸಂಖ್ಯೆಯ ಮೂಲ ಪತ್ತೆಗೆ ಸದಾಶಿವನಗರ ಪೊಲೀಸರು ಸೈಬರ್ ಅಧಿಕಾರಿಗಳ ಮೊರೆ ಹೋಗಿದ್ದಾರೆ. ಸಿಡಿಆರ್ ಪರಿಶೀಲಿಸಿದಾಗ ಆರೋಪಿ 14 ಸಂಖ್ಯೆಗಳನ್ನು ಬಳಸಿ ಕರೆ ಮಾಡಿರುವುದು ಗೊತ್ತಾಗಿದೆ. ಬಹುಶಃ ಅದು ‘ಇಂಟರ್‌ನೆಟ್ ಕಾಲ್’ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.‌
ರವಿಪೂಜಾರಿ ಎಂದು ಹೇಳಿಕೊಂಡ ಆ ವ್ಯಕ್ತಿ, ಸುರೇಶ್ ಎಲ್ಲಿ ಎಂದು ವಿಚಾರಿಸಿದ್ದಾನೆ. ಆಗ ಅವರು ಈಗಲ್‌ಟನ್‌ ರೆಸಾರ್ಟ್‌ನಲ್ಲಿದ್ದ ಕಾರಣ ಅರುಣ್‌ದೇವ್ ಅವರು ಸಂಸದರ ಆಪ್ತ ಸಹಾಯಕ ವಿನಯ್ ಮೊಬೈಲ್ ನಂಬರ್ ನೀಡಿದ್ದಾರೆ. ಅದೊಂದು ಹುಸಿ ಕರೆಯೂ ಇರಬಹುದು. ರವಿಪೂಜಾರಿ ಹೆಸರಿನಲ್ಲಿ ಕರೆ ಬಂದಿದ್ದರಿಂದ ಆತನ ವಿರುದ್ಧವೇ ಸುಲಿಗೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು ನಗರದ ಸುಮಾರು 20 ಮಂದಿಗೆ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದಿವೆ.ಸಾಮಾನ್ಯವಾಗಿ ಉದ್ಯಮಿಗಳು ಹಾಗೂ ಬಿಲ್ಡರ್ಸ್ ಗಳಿಗೆ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆಗಳು ಬರುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT