ಡಿ.ಕೆ ಸುರೇಶ್ 
ರಾಜ್ಯ

ಸಂಸದ ಡಿ.ಕೆ ಸುರೇಶ್ ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ

ಸಂಸದ ಡಿ.ಕೆ.ಸುರೇಶ್‍ ಅವರ ಕಚೇರಿ ದೂರವಾಣಿಗೆ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ ಆರೋಪದಡಿ ಭೂಗತ ಪಾತಕಿ ರವಿಪೂಜಾರಿ ...

ಬೆಂಗಳೂರು: ಸಂಸದ ಡಿ.ಕೆ.ಸುರೇಶ್‍ ಅವರ ಕಚೇರಿ ದೂರವಾಣಿಗೆ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ ಆರೋಪದಡಿ ಭೂಗತ ಪಾತಕಿ ರವಿಪೂಜಾರಿ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಮೂರುದಿನಗಳ ಕಾಲ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ 7 ಗಂಟೆಗಳ ನಂತರ ವ್ಯಕ್ತಿಯೊಬ್ಬ ಸಚಿವರ ಸಹೋದರ ಸುರೇಶ್ ಅವರ ಕಚೇರಿಗೆ ಕರೆ ಮಾಡಿದ್ದಾನೆ. ಆ ಸಂದರ್ಭದಲ್ಲಿ ಸುರೇಶ್ ಕಚೇರಿಯಲ್ಲಿ ಇರಲಿಲ್ಲವಾದ್ದರಿಂದ ಅವರ ಸಹಾಯಕ ಅರುಣ್‌ದೇವ್ ಕರೆ ಸ್ವೀಕರಿಸಿದ್ದಾರೆ. ಹಿಂದಿಯಲ್ಲಿ ಮಾತನಾಡಿರುವ ಆರೋಪಿ, ‘ನಾನು ರವಿಪೂಜಾರಿ. ಹಣಕ್ಕಾಗಿ ಕರೆ ಮಾಡಿದ್ದೇನೆ’ ಎಂದಿದ್ದಾನೆ. 
ಕರೆ ಬಂದ ಸಂಖ್ಯೆಯ ಮೂಲ ಪತ್ತೆಗೆ ಸದಾಶಿವನಗರ ಪೊಲೀಸರು ಸೈಬರ್ ಅಧಿಕಾರಿಗಳ ಮೊರೆ ಹೋಗಿದ್ದಾರೆ. ಸಿಡಿಆರ್ ಪರಿಶೀಲಿಸಿದಾಗ ಆರೋಪಿ 14 ಸಂಖ್ಯೆಗಳನ್ನು ಬಳಸಿ ಕರೆ ಮಾಡಿರುವುದು ಗೊತ್ತಾಗಿದೆ. ಬಹುಶಃ ಅದು ‘ಇಂಟರ್‌ನೆಟ್ ಕಾಲ್’ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.‌
ರವಿಪೂಜಾರಿ ಎಂದು ಹೇಳಿಕೊಂಡ ಆ ವ್ಯಕ್ತಿ, ಸುರೇಶ್ ಎಲ್ಲಿ ಎಂದು ವಿಚಾರಿಸಿದ್ದಾನೆ. ಆಗ ಅವರು ಈಗಲ್‌ಟನ್‌ ರೆಸಾರ್ಟ್‌ನಲ್ಲಿದ್ದ ಕಾರಣ ಅರುಣ್‌ದೇವ್ ಅವರು ಸಂಸದರ ಆಪ್ತ ಸಹಾಯಕ ವಿನಯ್ ಮೊಬೈಲ್ ನಂಬರ್ ನೀಡಿದ್ದಾರೆ. ಅದೊಂದು ಹುಸಿ ಕರೆಯೂ ಇರಬಹುದು. ರವಿಪೂಜಾರಿ ಹೆಸರಿನಲ್ಲಿ ಕರೆ ಬಂದಿದ್ದರಿಂದ ಆತನ ವಿರುದ್ಧವೇ ಸುಲಿಗೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು ನಗರದ ಸುಮಾರು 20 ಮಂದಿಗೆ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದಿವೆ.ಸಾಮಾನ್ಯವಾಗಿ ಉದ್ಯಮಿಗಳು ಹಾಗೂ ಬಿಲ್ಡರ್ಸ್ ಗಳಿಗೆ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆಗಳು ಬರುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT