ದಾಳಿಗೊಳಗಾದ ಸಂತ್ರಸ್ತೆ 
ರಾಜ್ಯ

ಎಂ.ಎಸ್‌. ರಾಮಯ್ಯ ಆಸ್ಪತ್ರೆ ರಸ್ತೆಯ ನಾಯಿಗಳ ಹಾವಳಿಗೆ ಬಿಬಿಎಂಪಿ ಬ್ರೇಕ್ ; 10ಕ್ಕೂ ಹೆಚ್ಚು ನಾಯಿಗಳು ಬಲೆಗೆ!

ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾರಿಹೋಕರಿಗೆ ದುಸ್ವಪ್ನವಾಗಿ ಕಾಡುತ್ತಿದ್ದ ಬೀದಿ ನಾಯಿಗಳ ಹಾವಳಿಗೆ ಕೊನೆಗೂ ಬಿಬಿಎಂಪಿ ಅಧಿಕಾರಿಗಳು ಬ್ರೇಕ್ ಹಾಕಿದ್ದು, ಗುರುವಾರ ಬೆಳಗ್ಗೆಯೇ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 10ಕ್ಕೂ ಹೆಚ್ಚು ನಾಯಿಗಳನ್ನು ಸೆರೆ ಹಿಡಿದು ಕರೆದೊಯ್ದಿದ್ದಾರೆ.

ಬೆಂಗಳೂರು: ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾರಿಹೋಕರಿಗೆ ದುಸ್ವಪ್ನವಾಗಿ ಕಾಡುತ್ತಿದ್ದ ಬೀದಿ ನಾಯಿಗಳ ಹಾವಳಿಗೆ ಕೊನೆಗೂ ಬಿಬಿಎಂಪಿ ಅಧಿಕಾರಿಗಳು ಬ್ರೇಕ್ ಹಾಕಿದ್ದು, ಗುರುವಾರ ಬೆಳಗ್ಗೆಯೇ ಕಾರ್ಯಾಚರಣೆ  ನಡೆಸಿದ ಸಿಬ್ಬಂದಿ 10ಕ್ಕೂ ಹೆಚ್ಚು ನಾಯಿಗಳನ್ನು ಸೆರೆ ಹಿಡಿದು ಕರೆದೊಯ್ದಿದ್ದಾರೆ.

ನಿನ್ನೆಯಷ್ಟೇ ನಗರದ ಎಂಎಸ್ ರಾಮಯ್ಯ ಆಸ್ಪತ್ರೆ ರಸ್ತೆಯಲ್ಲಿ ಸುಮಾರು 15ಕ್ಕೂ ಹೆಚ್ಚು ನಾಯಿಗಳು ದಾರಿ ಹೋಕರ ಮೇಲೆ ದಾಳಿ ಮಾಡಿದ್ದ ವಿಡಿಯೋಗಳು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್  ಆಗಿತ್ತು. ಮಾಧ್ಯಮಗಳಲ್ಲಿ ಬಿಬಿಎಂಪಿ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಅಧಿಕಾರಿಗಳು ಇಂದು ಬೆಳಗ್ಗೆಯೇ ನಾಯಿ ಹಿಡಿಯುವ ವಾಹನವನ್ನು ಘಟನಾ ಸ್ಥಳಕ್ಕೆ ರವಾನಿಸಿದ್ದರು. ಮೂರು ಜನರ  ತಂಡ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿ ದಾಳಿಕೋರ ನಾಯಿಗಳನ್ನು ಸೆರೆ ಹಿಡಿದಿದ್ದಾರೆ.

ಮೂಲಗಳ ಪ್ರಕಾರ ಕಾರ್ಯಾಚರಣೆ ವೇಳೆ ಸಿಬ್ಬಂದಿ ಸುಮಾರು 10ಕ್ಕೂ ಹೆಚ್ಚು ನಾಯಿಗಳನ್ನು ಸೆರೆ ಹಿಡಿದಿದ್ದು, ದಾರಿಹೋಕರನ್ನು ಕಚ್ಚುತ್ತಿದ್ದ ಕಂದು ಬಣ್ಣದ ನಾಯಿಗಾಗಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಆ  ರಸ್ತೆಯಲ್ಲಿ ಮಾತ್ರವಲ್ಲದೆ ಅದೇ ಪ್ರದೇಶದ ಅಕ್ಕಪಕ್ಕದ ರಸ್ತೆಗಳಲ್ಲಿರುವ ಬೀದಿನಾಯಿಗಳನ್ನೂ ಕೂಡ ಹಿಡಿಯುವುದಾಗಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಂ.ಎಸ್‌.ರಾಮಯ್ಯ ಆಸ್ಪತ್ರೆ ರಸ್ತೆಯಲ್ಲಿ ಹತ್ತಾರು ಮಂದಿಗೆ ಕಚ್ಚಿದ್ದ ನಾಯಿಗಳ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ನಗರದ ಜೆಪಿನಗರ, ಮೆಜೆಸ್ಟಿಕ್‌, ಶಿವಾಜಿನಗರ ಸೇರಿದಂತೆ ಕೆಲ ಪ್ರದೇಶಗಳಲ್ಲೂ ನಾಯಿ  ಕಡಿದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳೆದ ಮಂಗಳವಾರ ಗುಲ್ಬರ್ಗ ಮೂಲದ ಜ್ಯೋತಿ ಎಂಬುವವರು ಮನೆ ಕೆಲಸ ಮುಗಿಸಿಕೊಂಡು ಸಹೋದರಿಯೊಂದಿಗೆ ಬರುವ ವೇಳೆ ಸುಮಾರು ಹತ್ತು ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಜ್ಯೋತಿಯವರ ಕಾಲಿಗೆ  ಗಾಯಗಳಾಗಿವೆ. ಬುಧವಾರ ಓರ್ವ ಯುವಕ ಹಾಗೂ ವೃದ್ಧ ಸೇರಿದಂತೆ ಹಲವು ಮಂದಿಯ ಮೇಲೆ ದಾಳಿ ನಡೆಸಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT