ಹರತಾಳು ಹಾಲಪ್ಪ 
ರಾಜ್ಯ

ಅತ್ಯಾಚಾರ ಪ್ರಕರಣದಿಂದ ಮಾಜಿ ಸಚಿವ ಹರತಾಳು ಹಾಲಪ್ಪ ಖುಲಾಸೆ

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್ ದೊರೆತಿದೆ.

ಶಿವಮೊಗ್ಗ: ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್ ದೊರೆತಿದೆ. 
ಆ.17 ರಂದು ತೀರ್ಪು ಪ್ರಕಟಿಸಿರುವ ಶಿವಮೊಗ್ಗದ 2 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಬಿ.ಜಿ ರಮಾ ಹರತಾಳು ಹಾಲಪ್ಪ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದಾರೆ. ಪ್ರಕರಣದಿಂದ ಖುಲಾಸೆಗೊಂಡಿರುವ ಹರತಾಳು ಹಾಲಪ್ಪ ದೋಷಮುಕ್ತರಾಗಿದ್ದು ಕ್ಲೀನ್ ಚಿಟ್ ದೊರೆತಿದೆ. 
ಸತತ 7 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಶಿವಮೊಗ್ಗದ 2ನೇ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯದ ನ್ಯಾಯಾಧೀಶೆ ರಮಾ ಅವರು ಅಂತಿಮ ತೀರ್ಪುನ್ನು ಪ್ರಕಟಿಸಿದ್ದಾರೆ.  2009ರ ನವೆಂಬರ್​ 26 ರಂದು ಹರತಾಳು ಹಾಲಪ್ಪ ತಮ್ಮ ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿ ವೆಂಕಟೇಶಮೂರ್ತಿ ಹಾಗೂ ಪತ್ನಿ ಚಂದ್ರಾವತಿ 2010 ಮೇ 3 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಆರೋಪ ಕೇಳಿಬಂದಿದ್ದರಿಂದ ಹಾಲಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT