ಯಡಿಯೂರಪ್ಪ 
ರಾಜ್ಯ

ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪ ವಿರುದ್ಧ 2 ಎಫ್ಐಆರ್

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಗರಾಭಿವೃದ್ಧಿ ಇಲಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಗರಾಭಿವೃದ್ಧಿ ಇಲಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರು ನಗರ ವಿಭಾಗದ ಎಸಿಬಿ ಅಧಿಕಾರಿಗಳು ಯಡಿಯೂರಪ್ಪ ಹಾಗೂ ಅವರ ಅಧಿಕಾರಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಾಗಿದ್ದವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ  ಸೆಕ್ಷನ್ 7, 8​, 13(1)(c)(d) and 13(2) ಹಾಗೂ ಐಪಿಸಿ ಸೆಕ್ಷನ್  406, 420 and 120(B) ಅಡಿಯಲ್ಲಿ ಖಾಸಗಿ ದೂರನ್ನು ಆಧರಿಸಿ 2 ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲಿಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಬೆಂಗಳೂರು ಉತ್ತರ ತಾಲೂಕಿನಲ್ಲಿ ಡಾ. ಶಿವರಾಮ ಕಾರಂತ ಲೇಔಟ್ ಗಾಗಿ ವಶಪಡಿಸಿಕೊಳ್ಳಲಾಗಿದ್ದ 250 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಲು 2009-12 ರ ಅವಧಿಯಲ್ಲಿ ಸಿಎಂ ಆಗಿದ್ದ ಯಡಿಯೂರಪ್ಪ 20 ಆದೇಶ ಹೊರಡಿಸಿದ್ದರು ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!