ಸಂಗ್ರಹ ಚಿತ್ರ 
ರಾಜ್ಯ

ಶಿಕ್ಷಕಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಶಂಭಯ್ಯನ ಪಾಳ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಸುನಂದಮ್ಮನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ...

ಮಾಗಡಿ: ಶಂಭಯ್ಯನ ಪಾಳ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಸುನಂದಮ್ಮನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ತುಮಕೂರು ಜಿಲ್ಲೆಯ ದೇವರಾಯಪಟ್ನಾ ಮೂಲದ 55 ವರ್ಷದ ರೇಣುಕಾರಾಧ್ಯ ಧರ್ಮಸ್ಥಳದ ಸಮೀಪ ಮಲ್ಲರ್ ಮಾಡಿ ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. 
ಪತ್ನಿ ಸುನಂದಮ್ಮ ಶಾಲೆಯಲ್ಲಿದ್ದಾಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದ ರೇಣುಕಾರಾಧ್ಯ ನಂತರ ಅಲ್ಲಿಂದ ಪರಾರಿಯಾಗಿದ್ದ. ಬಂಧನ ಭೀತಿಯಿಂದ ರೇಣುಕಾರಾಧ್ಯ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 
ಸುನಂದಮ್ಮನ ಜತೆ ಲಿವಿಂಗ್ ಟುಗೆದರ್ ಸಂಬಂಧ ಹೊಂದಿದ್ದ ರೇಣುಕಾರಾಧ್ಯ ಆಕೆಯಿಂದ 2 ಲಕ್ಷ ಹಣ ಮತ್ತು 4 ಲಕ್ಷ ರುಪಾಯಿ ಮೊತ್ತದ ಚಿನ್ನಾಭರಣವನ್ನು ಪಡೆದಿದ್ದರು. ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಆಕೆ ಪೀಡಿಸಿದ್ದರಿಂದ ರೇಣುಕಾರಾಧ್ಯ ಆಕೆಯ ಹತ್ಯೆಗೆ ಮುಂದಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ರೇಣುಕಾರಾಧ್ಯಗೆ ಅದಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT