ಬಿ.ಎಸ್ ಯಡಿಯೂರಪ್ಪ 
ರಾಜ್ಯ

ಯಡಿಯೂರಪ್ಪ ವಿರುದ್ಧ ಎಫ್ ಐ ಆರ್: ಎಸಿಬಿ ಹಾಗೂ ದೂರುದಾರನಿಗೆ ಹೈಕೋರ್ಟ್ ನೊಟೀಸ್

ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎಸಿಬಿ ಮತ್ತು ದೂರದಾರನಿಗೆ ...

ಬೆಂಗಳೂರು:  ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎಸಿಬಿ ಮತ್ತು ದೂರದಾರನಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಕಾನೂನು ಬಾಹಿರ ಡಿ ನೋಟಿಫಿಕೇಶನ್ ಸಂಬಂಧ ತಮ್ಮ ವಿರುದ್ಧದ ಎಫ್ ಐಆರ್ ಅನ್ನು ವಜಾಗೊಳಿಸಬೇಕೆಂದು ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಎಸಿಬಿ ಮತ್ತು ದೂರುದಾರ ಖಾಸಗಿ ವಿವಿಯ ಮಾಜಿ ಉಪ ಕುಲಪತಿ ಡಾ.ಅಯ್ಯಪ್ಪ ಅವರಿಗೆ ನೊಟೀಸ್ ನೀಡಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಡಾ.ಶಿವರಾಮ ಕಾರಂತ ಬಡಾವಣೆಯ 257 ಎಕರೆ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿತ್ತು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದರು. 
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯಲ್ಲಿ 20 ವಿವಿಧ ಆದೇಶಗಳನ್ನು ಹೊರಡಿಸಿ 250 ಎಕರೆ ಜಮೀನು ಡಿನೋಟಿಫಿಕೇಶನ್ ಗೆ ಆದೇಶಿಸಿದ್ದರು ಎಂದು ಡಾ.ಅಯ್ಯಪ್ಪ ದೂರು ಸಲ್ಲಿಸಿದ್ದರು.
ಯಡಿಯೂರಪ್ಪ ವಿರುದ್ಧದ ಈ ಪ್ರಕರಣ ಸಂಬಂಧ ಎಸಿಬಿ ಅಧಿಕಾರಿಗಳು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಬಂಧಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT