ಆಲದ ಮರವನ್ನು ಮರು ನೆಟ್ಟ ದೃಶ್ಯ 
ರಾಜ್ಯ

ಬೇರು ಸಹಿತ ಕಿತ್ತ ಆಲದ ಮರವನ್ನು ಮರು ನೆಟ್ಟ ಮಣಿಪಾಲ ತಾಂತ್ರಿಕ ಶಿಕ್ಷಣ ಸಂಸ್ಥೆ

50 ವರ್ಷಗಳ ಹಿಂದಿನ ಆಲದ ಮರ ಇತ್ತೀಚಿನ ಭಾರೀ ಮಳೆಗೆ ಉಡುಪಿಯ ಬನ್ನಂಜೆ ಬಳಿ ಬುಡ ಸಮೇತ...

ಉಡುಪಿ: 50 ವರ್ಷಗಳ ಹಿಂದಿನ ಆಲದ ಮರ ಇತ್ತೀಚಿನ ಭಾರೀ ಮಳೆಗೆ ಉಡುಪಿಯ ಬನ್ನಂಜೆ ಬಳಿ ಬುಡ ಸಮೇತ ಬಿದ್ದಿತ್ತು. ಅದನ್ನು ಮಣಿಪಾಲ ತಾಂತ್ರಿಕ ಸಂಸ್ಥೆಯ ಆವರಣದಲ್ಲಿ ಮತ್ತೆ ನೆಡಲಾಗಿದೆ. 
ಸಂಸ್ಥೆಯ ನಿರ್ದೇಶಕ ಡಾ.ಜಿ.ಕೆ.ಪ್ರಭು ಅವರ ಯೋಜನೆಯಂತೆ ಬನ್ನಂಜೆಯಿಂದ 9 ಕಿಲೋ ಮೀಟರ್ ದೂರದಲ್ಲಿರುವ ಆಲದ ಮರದ ಬುಡವನ್ನು ಕ್ರೇನ್ ಸಹಾಯದಿಂದ ಎತ್ತಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೆಡಲಾಗಿದೆ. ಉಡುಪಿ ಅರಣ್ಯಾಧಿಕಾರಿ ಕ್ಲಿಫೊರ್ಡ್ ಲೊಬೊ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಮರದ ಸಾಗಾಟಕ್ಕೆ ಅನುವು ಮಾಡಿಕೊಡಲು ಅದನ್ನು ಅಲ್ಲಲ್ಲಿ ಕತ್ತರಿಸಲಾಯಿತು.
ಮರದ ಬೇರನ್ನು ನೆಡಲು ಮೊದಲೇ ಗುಂಡಿ ತೋಡಿ ಇಡಲಾಗಿತ್ತು. ಮರವನ್ನು ಕ್ರೇನ್ ನಲ್ಲಿ ತಂದು ಕ್ಯಾಂಪಸ್ ಆವರಣದಲ್ಲಿ ನೆಡುವವರೆಗಿನ ದೃಶ್ಯ ನಿಜಕ್ಕೂ ಸೊಬಗಾಗಿತ್ತು. ಸ್ಥಳೀಯರು ಮತ್ತು ವಿದ್ಯಾರ್ಥಿಗಳು ಕುತೂಹಲದಿಂದ ವೀಕ್ಷಿಸುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT