ಸಿದ್ದರಾಮಯ್ಯ 
ರಾಜ್ಯ

ಅರ್ಕಾವತಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್!

ಅರ್ಕಾವತಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ನ್ಯಾ.ಹೆಚ್ಎಸ್ ಕೆಂಪಣ್ಣ ಆಯೋಗ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿದೆ.

ಬೆಂಗಳೂರು: ಅರ್ಕಾವತಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ನ್ಯಾ.ಹೆಚ್ಎಸ್ ಕೆಂಪಣ್ಣ ಆಯೋಗ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿದೆ. 
ಕರ್ನಾಟಕ ಮುಖ್ಯಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರಿಗೆ ಕೆಂಪಣ್ಣ ಆಯೋಗ ವರದಿ ಸಲ್ಲಿಸಿದ್ದು, ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿದೆ. ಮೂಲಗಳ ಪ್ರಕಾರ ಬಿಡಿಎ ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿನ ಕೆಲವು ಅಧಿಕಾರಿಗಳ ಲೋಪವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. 
ಅರ್ಕಾವತಿ ಬಡಾವಣೆಯ ಅಭಿವೃದ್ಧಿಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ದೂರುಗಳನ್ನು ಪರಿಶೀಲನೆಯ ಕೆಲಸವನ್ನು ಪೂರ್ಣಗೊಳಿಸಿದ್ದು, ವರದಿಯನ್ನಾಧರಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ಸುಮಾರು 1,861 ಪುಟಗಳ ವರದಿಯಲ್ಲಿ ಆಯೋಗ ಹೇಳಿದೆ. 
ಸಿಎಂ ಸಿದ್ದರಾಮಯ್ಯ 541 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿ ತನಿಖೆಗೆ ಆಗ್ರಹಿಸಿದ್ದ ಹಿನ್ನೆಲೆಯಲ್ಲಿ 2014 ರ ಆಗಸ್ಟ್ ನಲ್ಲಿ ಕೆಂಪಣ್ಣ ಆಯೋಗವನ್ನು ರಚಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT