ಹಿಂದೂ ಧರ್ಮಕ್ಕೆ ಮತಾಂತರಗೊಂಡ ಸೈಯ್ಯದ್ ಅಬ್ಬಾಸ್ ಮತ್ತು ಅವರ ಪುತ್ರ 
ರಾಜ್ಯ

ಮೈಸೂರು: 25 ವರ್ಷದ ನಂತರ ಮತ್ತೆ ಹಿಂದೂ ಧರ್ಮಕ್ಕೆ ಮರಳಿದ ಅಪ್ಪ-ಮಗ

ಮೈಸೂರು: ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮೈಸೂರು ಮೂಲದ ತಂದೆ-ಮಗ 25 ವರ್ಷಗಳ ನಂತರ ಮತ್ತೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಸಯ್ಯದ್ ಅಬ್ಬಾಸ್ (46) ಹಾಗೂ ಅವರ ಪುತ್ರ ಸೈಯ್ಯದ್ ಹತೀಕ್ (20) ಮಂಗಳವಾರ ಇಲ್ಲಿನ ಆರ್ಯ ಭವನದಲ್ಲಿ ಸಂಪ್ರದಾಯದ ಪ್ರಕಾರ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡರು.
ಮಂಡ್ಯ ಮೂಲದವರಾದ ಗೋವಿಂದರಾಜು ಅವರ ಪುತ್ರ ಶೇಷಾದ್ರಿ 25 ವರ್ಷಗಳ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಸೈಯ್ಯದ್ ಅಬ್ಬಾಸ್ ಎಂದು ಹೆಸರು ಬದಲಿಸಿಕೊಂಡಿದ್ದರು. ನಂತರ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು, ಇದರಿಂದಾಗಿ ಅವರು ತಮ್ಮ ಸಂಬಂಧಿಕರಿಂದ ದೂರಾಗಿದ್ದರು.
ನಂತರ ನಡೆದ ಹಲವು ಘಟನೆಗಳಿಂದ ಅಸಮಾಧಾನ ಗೊಂಡ ಸೈಯ್ಯದ್ ಅಬ್ಬಾಸ್ ಹಿಂದೂ ಧರ್ಮಕ್ಕೆ ಮರಳಲು ಜನವರಿ 2017 ರಲ್ಲಿ ಶ್ರೀರಾಮ ಸೇನೆ ನೆರವು ಕೋರಿದ್ದರು. 
ಅವರ ಮನವಿಗೆ ಸ್ಪಂದಿಸಿದ ಶ್ರೀರಾಮ ಸೇನೆ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳ ಮೂಲಕ ಹಿಂದೂ ಧರ್ಮಕ್ಕೆ ಮರಳಿದರು. ಈ ವೇಳೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸಹ ಹಾಜರಿದ್ದರು.
ಮತಾಂತರಗೊಂಡ ನಂತರ ಸೈಯ್ಯದ್ ಅಬ್ಬಾಸ್ ಅವರು ಶೇಷಾದ್ರಿಯಾಗಿ ಹಾಗೂ ಪುತ್ರ ಸೈಯ್ಯದ್ ಹತೀಕ್ ಅವರು ಹರ್ಷಿಲ್ ಆರ್ಯ ಎಂದು ಹೆಸರು ಬದಲಿಸಿಕೊಂಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT