ನಿನ್ನೆ ಬೆಂಗಳೂರಿನಲ್ಲಿ ಗ್ರಾಮೀಣ ಭಾರತದ ಡಿಜಿಟಲೀಕರಣ ಕಾರ್ಯಕ್ರಮದ ಅಂಗವಾಗಿ ವಿಜಯ ಬ್ಯಾಂಕ್‍ನ 100ನೇ ಗ್ರಾಮೀಣ ಶಾಖೆ ಉದ್ಘಾಟಿಸಿದ ಅರುಣ್ ಜೇಟ್ಲಿ 
ರಾಜ್ಯ

ನಗದು ವಹಿವಾಟು ದೇಶಕ್ಕೆ ಶಾಪ: ಅರುಣ್ ಜೇಟ್ಲಿ

ತ್ವರಿತವಾಗಿ ಬೆಳವಣಿಗೆ ಹೊಂದುತ್ತಿರುವ ಭಾರತದಂತಹ ದೇಶಗಳಲ್ಲಿ ನಗದು ಆಧಾರಿತ ವಹಿವಾಟು....

ಬೆಂಗಳೂರು: ತ್ವರಿತವಾಗಿ ಬೆಳವಣಿಗೆ ಹೊಂದುತ್ತಿರುವ ಭಾರತದಂತಹ ದೇಶಗಳಲ್ಲಿ ನಗದು ಆಧಾರಿತ ವಹಿವಾಟು ವ್ಯವಸ್ಥೆಗೆ ಶಾಪದಂತೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಅವರು ನಿನ್ನೆ ಬೆಂಗಳೂರಿನಲ್ಲಿ, ಗ್ರಾಮೀಣ ಭಾರತದ ಡಿಜಿಟಲೀಕರಣ ಕಾರ್ಯಕ್ರಮದ ಅಂಗವಾಗಿ, ವಿಜಯ ಬ್ಯಾಂಕ್‍ನ 100ನೇ ಗ್ರಾಮೀಣ ಶಾಖೆ,100ನೇ ಡಿಜಿಟಲ್ ಗ್ರಾಮ ಹಾಗೂ 100ನೇ ಎಟಿಎಂಗೆ ಚಾಲನೆ ನೀಡಿ ಮಾತನಾಡಿದರು.
 ಭಾರತ ಅತಿಹೆಚ್ಚು ನಗದು ವ್ಯವಸ್ಥೆ ಹೊಂದಿರುವ ದೇಶವಾಗಿದ್ದು, ನೋಟುಗಳ ಮುದ್ರಣ ವ್ಯವಸ್ಥೆ ಹಾಗೂ ನಗದು ಪೂರೈಕೆಗೆ ಹೆಚ್ಚಿನ ಚ್ಚವಾಗುತ್ತದೆ. ಭಯೋತ್ಪಾದನೆ, ಆತಂಕವಾದ ಕೂಡ ನಗದು ವ್ಯವಸ್ಥೆಯ ಆಧಾರದ ಮೇಲೆ ನಡೆಯುತ್ತದೆ. ಇದು ಜಿಡಿಪಿ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಡಿಜಿಟಲ್ ಆರ್ಥಿಕತೆಯತ್ತ ದೇಶ ಹೊರಳಬೇಕಾಗಿದೆ. ಜನ್‍ಧನ್ ಯೋಜನೆಯನ್ನು ಇದೇ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಈ ಯೋಜನೆಗೆ ಅತ್ಯಂತ ಹೆಚ್ಚು ಯಶಸ್ಸು ದೊರೆತಿದೆ ಎಂದರು.
ಬ್ಯಾಂಕ್‍ಗಳು ಹೆಚ್ಚಿನ ಶಾಖೆ ಮತ್ತು ಎಟಿಎಂಗಳನ್ನು ಸ್ಥಾಪಿಸುವ ಮೂಲಕ ರಾಷ್ಟ್ರ ನಿರ್ಮಾಣದ ಬದ್ದತೆಯಲ್ಲಿ ತೊಡಗಿಸಿಕೊಂಡಿವೆ. ಡಿಜಿಟಲ್ ವಹಿವಾಟು ವೆಚ್ಚ ಕಡಿಮೆ ಮಾಡಲು ಮತ್ತು ಡಿಜಿಟಲ್ ಹಣ ವರ್ಗಾವಣೆಯತ್ತ ಜನರನ್ನು ಆಕರ್ಷಿಸಲು ಸರ್ಕಾರ ಎಲ್ಲಾ ರೀತಿಯಲ್ಲೂ ನೆರವು ನೀಡುತ್ತಿದೆ. ಎಂದು ಅರುಣ್ ಜೇಟ್ಲಿ ಹೇಳಿದರು.
ನಂತರ ಅವರು, ಎಚ್ ಎಎಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಘು ಯುದ್ಧ ಹೆಲಿಕಾಪ್ಟರ್ ಎಲ್‍ಸಿಎಚ್ ಹಾಗೂ ಹಾಕ್ ಐ ಯುದ್ಧ ವಿಮಾನಗಳನ್ನು ಲೋಕಾರ್ಪಣೆ ಮಾಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT