ಶಾಲೆಯ ಆವರಣದಲ್ಲಿ ಗಿಡ ನೆಡುತ್ತಿರುವ ಸಿಎಂ 
ರಾಜ್ಯ

ಮೈಸೂರು: ತಾವು ಕಲಿತ ಶಾಲೆಯಲ್ಲೇ ಮಕ್ಕಳಿಗೆ ಸಿದ್ದರಾಮಯ್ಯ ವ್ಯಾಕರಣ ಪಾಠ!

ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ವ್ಯಾಕರಣ ಪಾಠ ಹೇಳಿಕೊಡುವ ಮೂಲಕ ಕೆಲ ಕಾಲ ಶಿಕ್ಷಕರಾಗಿದ್ದರು....

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ವ್ಯಾಕರಣ ಪಾಠ ಹೇಳಿಕೊಡುವ ಮೂಲಕ ಕೆಲ ಕಾಲ ಶಿಕ್ಷಕರಾಗಿದ್ದರು. 
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ತಾಲೂಕಿನ ಕುಪ್ಪೇಗಾಲದ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು.
ಈ ವೇಳೆ ಶಿಕ್ಷಕರು, ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯರು ಹಾಗೂ ಮಕ್ಕಳು ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಜೊತೆಗೆ ಮೈಸೂರು ಪೇಠ ತೊಡಿಸಿ ಸನ್ಮಾನಿಸಿದರು.
ತಮ್ಮ ಎಡೆಬಿಡದ ಕಾರ್ಯಕ್ರಮಗಳ ಮಧ್ಯೆ ಬಿಡುವು ಮಾಡಿಕೊಂಡು ಶಾಲಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ ಮಾಡಿದರು.
ನಾನು ಓದಿದ ಶಾಲೆಯ ಋಣ ತೀರಿಸುವುದಕ್ಕಾಗಿ ನನ್ನ ಸ್ವಂತ ಹಣದಿಂದ ಶಾಲೆಗೆ ಕಾಂಪೌಂಡ್, ಗ್ರಂಥಾಲಯ ಕಟ್ಟಿಸಿಕೊಡುತ್ತೇನೆ. ಅಲ್ಲದೆ, ಸರ್ಕಾರದಿಂದ ಈಗಾಗಲೇ 10 ಕೊಠಡಿಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. 
ಖಾಸಗಿ ಶಾಲೆಗಳಲ್ಲಿ ಓದು ಮಕ್ಕಳು ಬುದ್ಧಿವಂತರಾಗಿರುತ್ತಾರೆ ಎಂಬ ತಪ್ಪುಗ್ರಹಿಕೆಯಿದೆ, ಆದರೆ ಖಾಸಗಿ ಶಾಲಾ ಮಕ್ಕಳಿಗಿಂತ ಸರ್ಕಾರಿ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಾಗಿದೆ. ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿಸುವುದರಿಂದ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಅರ್ಥ ಮಾಡಿಕೊಳ್ಳುವುದು ಸುಲಭವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 
ತಾವು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡಲು ಸಹಾಯ ಮಾಡಿದ ತಮ್ಮ ಶಿಕ್ಷಕರಾದ ನಂಜೇಗೌಡ ಮತ್ತು ರಾಜಪ್ಪ ಅವರಿದೆ ನಮನ ಸಲ್ಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್