ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ 
ರಾಜ್ಯ

ಇನ್ನು ಮುಂದೆ ಅಧೀನ ಕಾಲೇಜುಗಳಲ್ಲಿ ಸಿನಿಮಾ ಶೂಟಿಂಗ್ ಇಲ್ಲ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಅಂಗಸಂಸ್ಥೆಯಾಗಿರುವ ರಾಜ್ಯದ...

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಅಂಗಸಂಸ್ಥೆಯಾಗಿರುವ ರಾಜ್ಯದ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಇನ್ನು ಮುಂದೆ ಸಿನಿಮಾ ಶೂಟಿಂಗ್ ಸೇರಿದಂತೆ ಯಾವುದೇ ಪಠ್ಯೇತರ ಚಟುವಟಿಕೆ ನಡೆಸಬಾರದೆಂದು ವಿದ್ಯಾಲಯ ಆದೇಶ ಹೊರಡಿಸಿದೆ. 
ತರಗತಿ ನಡೆಯುತ್ತಿರುವ ಸಂದರ್ಭದಲ್ಲಿ ಸಿನಿಮಾ ಶೂಟಿಂಗ್ ಮಾಡುವ ತಂಡಗಳು ತೊಂದರೆಯುಂಟುಮಾಡುತ್ತಾರೆ ಎಂದು ಕೆಲವು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ದೂರು ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ವಿದ್ಯಾಲಯ ಕೈಗೊಂಡಿದೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಅಧಿಕೃತ ಮೂಲಗಳು,ಕಾಲೇಜು ಸಮಯಗಳಲ್ಲಿ ಸಿನಿಮಾ ಶೂಟಿಂಗ್ ಇತ್ಯಾದಿಗಳು ನಡೆಯುವುದರಿಂದ ಕಾಲೇಜು ಕ್ಯಾಂಪಸ್ ನಲ್ಲಿ ಭಾರೀ ಗದ್ದಲವುಂಟಾಗುತ್ತದೆ. ಇದರಿಂದ ವಾತಾವರಣ ಹಾಳಾಗುತ್ತದೆ ಎಂದು ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರಿಂದ ಹಲವು ಬಾರಿ ದೂರುಗಳು ಬಂದಿವೆ. ಹೀಗಾಗಿ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದೆಂದು ನಾವು ಎಲ್ಲಾ ಕಾಲೇಜುಗಳಿಗೆ ಸೂಚನೆ ನೀಡಿದ್ದೇವೆ ಎಂದಿವೆ.
ಕಾಲೇಜುಗಳಲ್ಲಿ ಶೂಟಿಂಗ್ ಇರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತರಗತಿಗೆ ಬಾರದೆ ಶೂಟಿಂಗ್ ನೋಡಲು ಹೋಗುತ್ತಾರೆ ಎನ್ನುತ್ತಾರೆ ಬೆಂಗಳೂರಿನ ಪ್ರಖ್ಯಾತ ಕಾಲೇಜೊಂದರ ಸಿಬ್ಬಂದಿ. ಇತ್ತೀಚೆಗೆ ಸಿನಿಮಾ ತಂಡವೊಂದು ಕಾಲೇಜಿನಲ್ಲಿ 10 ದಿನಗಳ ಕಾಲ ಶೂಟಿಂಗ್ ಗೆಂದು ಬಿಡಾರ ಹೂಡಿತ್ತು. ಈ ಹತ್ತೂ ದಿನಗಳು ಕೂಡ ವಿದ್ಯಾರ್ಥಿಗಳ ಹಾಜರಾತಿ ಶೇಕಡಾ 20ಕ್ಕಿಂತಲೂ ಕಡಿಮೆಯಿದ್ದವು ಎನ್ನುತ್ತಾರೆ ಅವರು.
ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನ ಮೂರನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿ ರಾಹುಲ್ ಎಂ.ಬೊಗಸೆ, ಸಿನಿಮಾ ಶೂಟಿಂಗ್ ಇದ್ದರೆ ನಮಗೆ ತರಗತಿಯಲ್ಲಿ ಪಾಠ ಕೇಳಲು ಗಮನ ಬರುವುದಿಲ್ಲ. ಕಾಲೇಜಿಗೆ ಬಂದಾಗ ಪಾಠ ಕೇಳಬೇಕು, ಓದಬೇಕು, ಅಷ್ಟೇ ನಮಗೆ ಗೊತ್ತಿರುವುದು. ಅದಕ್ಕೆ ತೊಂದರೆಯಾಗಬಾರದು ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT