ಡಿವಿಜಿ ರಸ್ತೆಯ ಒಂದು ನೋಟ 
ರಾಜ್ಯ

ಬೆಂಗಳೂರು: ಡಿವಿಜಿ ರಸ್ತೆಯ 100ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳನ್ನು ಮುಚ್ಚಲು ಪಾಲಿಕೆ ನೊಟೀಸ್

ಇಲ್ಲಿ ವಸತಿ ಕಟ್ಟಡಗಳೇ ಇಲ್ಲ, ಆದರೂ ಕೂಡ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಡಿವಿಜಿ...

ಬೆಂಗಳೂರು: ಇಲ್ಲಿ ವಸತಿ ಕಟ್ಟಡಗಳೇ ಇಲ್ಲ, ಆದರೂ ಕೂಡ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ  ಡಿವಿಜಿ ರಸ್ತೆಯನ್ನು ಗುರಿಯಾಗಿಟ್ಟುಕೊಂಡು  ವ್ಯಾಪಾರಿಗಳಿಗೆ ಅಂಗಡಿ ಮುಚ್ಚಲು ನೊಟೀಸ್ ನೀಡಿರುವುದೇಕೆ ಇದು  ಅಲ್ಲಿನ ವ್ಯಾಪಾರಿಗಳ ಪ್ರಶ್ನೆ ಹಾಗೂ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನ ಗಾಂಧಿ ಬಜಾರ್ ನ ಡಿವಿಜಿ ರಸ್ತೆಯಲ್ಲಿರುವ ಸುಮಾರು 100 ವಾಣಿಜ್ಯ ಅಂಗಡಿಗಳು, ಸಂಕೀರ್ಣಗಳನ್ನು ಮುಚ್ಚುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೊಟೀಸ್ ಜಾರಿ ಮಾಡಿದೆ. 30 ಅಡಿ ಅಗಲದ ರಸ್ತೆ ವಸತಿ ವಿಭಾಗದಡಿ ಬರುತ್ತದೆ ಎಂದು ಕಾರಣ ನೀಡಿ ನೊಟೀಸ್ ಜಾರಿ ಮಾಡಲಾಗಿದೆ.
2015ರ ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಪ್ರಕಾರ, ಕನ್ನಡದ ಖ್ಯಾತ ಬರಹಗಾರ ಡಿ.ವಿ.ಗುಂಡಪ್ಪ ಅವರ ಹೆಸರಿನ ಡಿವಿಜಿ ರಸ್ತೆ ವಸತಿ ವಲಯವಾಗಿದೆ. ಅಲ್ಲದೆ ಭೂ ಬಳಕೆ ನಿಯಮ ಪ್ರಕಾರ, ರಸ್ತೆಯ ಅಗಲ 40 ಅಡಿಗಳಿಗಿಂತ ಕಡಿಮೆಯಾದರೆ ಪ್ರಮುಖ ವಸತಿ ಪ್ರದೇಶಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಡಿವಿಜಿ ರಸ್ತೆಯ ಅಗಲ 30 ಅಡಿಗಿಂತ ಕಡಿಮೆಯಿದೆ.
ಅದಾಗ್ಯೂ ಕಳೆದ ಹಲವು ದಶಕಗಳಿಂದ ರಸ್ತೆ ವಾಣಿಜ್ಯ ಚಟುವಟಿಕೆಯ ಪ್ರದೇಶವಾಗಿ ಮಾರ್ಪಟ್ಟಿದೆ. 2015ರ ಪರಿಷ್ಕೃತ ಮಾಸ್ಟರ್ ಪ್ಲಾನ್ ಪ್ರಕಾರ, ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿ ನಿಯಮ ಉಲ್ಲಂಘಿಸಲಾಗಿದೆ. ಹೀಗೆ ನಿಯಮ ಉಲ್ಲಂಘನೆಯಿಂದ ಸಂಚಾರ ದಟ್ಟಣೆ, ವಾಯುಮಾಲಿನ್ಯ, ಜನರ, ವಾಹನಗಳ ಸಂಚಾರಕ್ಕೆ ತೊಂದರೆಯುಂಟಾಗುತ್ತದೆ.  
ಈ ನಿಟ್ಟಿನಲ್ಲಿ ತೊಂದರೆಯನ್ನು ನಿವಾರಿಸಲು ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ  ಚಟುವಟಿಕೆಗಳನ್ನು ನಡೆಸುವುದಕ್ಕೆ ಪಾಲಿಕೆ ತಡೆ ತರಲಿದೆ ಎಂದು  ಕಳೆದ ಡಿಸೆಂಬರ್ ನಲ್ಲಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸಾರ್ವಜನಿಕ ನೊಟೀಸ್ ಜಾರಿ ಮಾಡಿದ್ದರು.
ಅಲ್ಲದೆ ತಮ್ಮ ವಾಣಿಜ್ಯ ಮಳಿಗೆಗಳನ್ನು ಮುಚ್ಚಲು ವ್ಯಾಪಾರಸ್ಥರಿಗೆ ಬಿಬಿಎಂಪಿ ಸಮಯಾವಕಾಶವನ್ನು ಕೂಡ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?