ಸಿದ್ದರಾಮಯ್ಯ 
ರಾಜ್ಯ

ಸಾರ್ವಜನಿಕರ ಪ್ರಬಲ ವಿರೋಧಕ್ಕೆ ಮಣಿದ ಸರ್ಕಾರ: ಕೆರೆಗಳ ಡಿನೋಟಿಫೈ ವಿಷಯ ಕೈ ಬಿಡಲು ನಿರ್ಧಾರ

ಸಾರ್ವಜನಿಕರ ನಿರಂತರ ಪ್ರತಿಭಟನೆ ಹಾಗೂ ರಾಜ್ಯಪಾಲರ ಕಾಳಜಿಯ ಹಿನ್ನೆಲೆಯಲ್ಲಿ ಬತ್ತಿದ ಕೆರೆಗಳನ್ನು ಡಿನೋಟಿಫೈ ಮಾಡುವ ಪ್ರಸ್ತಾವನೆಯನ್ನು ಸರ್ಕಾರ...

ಬೆಂಗಳೂರು: ಸಾರ್ವಜನಿಕರ ನಿರಂತರ ಪ್ರತಿಭಟನೆ ಹಾಗೂ ರಾಜ್ಯಪಾಲರ ಕಾಳಜಿಯ ಹಿನ್ನೆಲೆಯಲ್ಲಿ ಬತ್ತಿದ ಕೆರೆಗಳನ್ನು ಡಿನೋಟಿಫೈ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೈ ಬಿಟ್ಟಿದೆ.
ಈ ಸಂಬಂಧ  ರಾಜ್ಯಪಾಲ ವಜುಭಾಯ್‌ ವಾಲಾ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ,  ವಿವಿಧ ಇಲಾಖೆಗಳ ಅಭಿಪ್ರಾಯ ಪರಿಶೀಲನೆ ನಂತರ ಕೆರೆಗಳ ಡಿನೋಟಿಫಿಕೇಷನ್ ವಿಚಾರ ಕೈ ಬಿಟ್ಟಿರುವುದಾಗಿ ಹೇಳಿದ್ದಾರೆ. ಈಗಿನ ಮತ್ತು ಭವಿಷ್ಯದ ಜನಾಂಗಕ್ಕೆ ಕೆರೆಗಳನ್ನು ಸಂರಕ್ಷಿಸುವುದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.
ಭೂಕಂದಾಯ ಕಾಯ್ದೆಯ ಸೆಕ್ಷನ್‌ 68 ಕ್ಕೆ ತಿದ್ದುಪಡಿ ಮಾಡಲು ಪರಿಶೀಲನೆ ನಡೆದಿತ್ತು. ಈ ಬಗ್ಗೆ ಅಭಿಪ್ರಾಯ ಪಡೆಯಲು ಪ್ರಸ್ತಾವನೆಯನ್ನು ವಿವಿಧ ಇಲಾಖೆಗಳಿಗೆ ಕಳುಹಿಸಿದ್ದೆವು. ವಿವಿಧ ಇಲಾಖೆಗಳ ಅಭಿಪ್ರಾಯವನ್ನು ಪರಿಶೀಲಿಸಿದ ಬಳಿಕ ಪ್ರಸ್ತಾವನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ.  ಕೆರೆಗಳ ಮೇಲೆ ಸಾರ್ವಜನಿಕರಿಗೆ ಇರುವ ಹಕ್ಕನ್ನು ಬದಲಿಸುವ ಅಥವಾ ರದ್ದು ಪಡಿಸುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ತಿರುಗೇಟು ನೀಡಿದ ಅಪ್ಘಾನಿಸ್ತಾನ! ಹೇಳಿದ್ದೇನು?Video

ಕರ್ನಾಟಕ: 10 ದಿನ ಮಳೆ ಮುಂದುವರಿಕೆ, ನಾಳೆ ಭಾರಿ ವರ್ಷಧಾರೆ ಸಾಧ್ಯತೆ, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ!

ಬಿಜೆಪಿ ಹೆದರಿಸಿ ನಮ್ಮ ಪಕ್ಷದ ಮೂವರು ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದೆ: BJP-JDU ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

SCROLL FOR NEXT