ಪಾದಚಾರಿ ಮೇಲೆ ಹರಿದ ಬಿಎಸ್ ಯಡಿಯೂರಪ್ಪ ಪುತ್ರನ ಕಾರು 
ರಾಜ್ಯ

ಪಾದಚಾರಿ ಮೇಲೆ ಹರಿದ ಬಿಎಸ್ ಯಡಿಯೂರಪ್ಪ ಪುತ್ರನ ಕಾರು: ಯುವಕ ಸಾವು, ಚಾಲಕ ಬಂಧನ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಶಾಸಕ ಬಿ.ವೈ ರಾಘವೇಂದ್ರ ಅವರು ಚಲಿಸುತ್ತಿದ್ದ ಕಾರು ಪಾದಚಾರಿಯೊಬ್ಬರ ಮೇಲೆ ಹರಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ...

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಶಾಸಕ ಬಿ.ವೈ ರಾಘವೇಂದ್ರ ಅವರು ಚಲಿಸುತ್ತಿದ್ದ ಕಾರು ಪಾದಚಾರಿಯೊಬ್ಬರ ಮೇಲೆ ಹರಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. 

ಹೊನ್ನಾಳಿ ತಾಲೂಕು ಮಾದೂರು ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದೆ. ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ 24 ವರ್ಷದ ಸುರೇಶ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರು ರಾಘವೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಸ್ಥಳಕ್ಕಾಮಗಿಸಿ ಪೊಲೀಸರು ಜನರನ್ನು ಚದುರಿಸಿ, ಪ್ರಕರಣ ದಾಖಲಿಸಿಕೊಂಡು ಚಾಲಕ ರವಿಚಂದ್ರನ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಪೊಲೀಸರು, ಘಟನೆ ಬಳಿಕ ಅಗತ್ಯವಿದ್ದ ಎಲ್ಲಾ ಕ್ರಮಗಳು ಪೂರ್ಣಗೊಳ್ಳುವವರೆಗೂ ರಾಘವೇಂದ್ರ ಅವರು ಸ್ಥಳದಲ್ಲಿಯೇ ಇದ್ದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT