ತುಮಕೂರು: ಬಿಎಸ್ ವೈ ಬೆಂಬಲಿಗರಿಂದ ಟ್ವಿ ವರದಿಗಾರನ ಮೇಲೆ ಹಲ್ಲೆ, ದೂರು ದಾಖಲು 
ರಾಜ್ಯ

ತುಮಕೂರು: ಬಿಎಸ್ ವೈ ಬೆಂಬಲಿಗರಿಂದ ಟಿವಿ ವರದಿಗಾರನ ಮೇಲೆ ಹಲ್ಲೆ, ದೂರು ದಾಖಲು

ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ಎಸ್. ಯಡಿಯೂರಪ್ಪ ಅವರ ನಿಷ್ಠರಾದ ಇಬ್ಬರು ಬಿಜೆಪಿ ನಾಯಕರು ಖಾಸಗಿ ಟಿವಿ ಚಾನಲ್ ವರದಿಗಾರನ ಮೇಲೆ ಹಲ್ಲೆ ನಡೆಸಿದ್ದಾರೆ.

ತುಮಕೂರು: ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ಎಸ್. ಯಡಿಯೂರಪ್ಪ ಅವರ ನಿಷ್ಠರಾದ ಇಬ್ಬರು ಬಿಜೆಪಿ ನಾಯಕರು ಖಾಸಗಿ ಟಿವಿ ಚಾನಲ್ ವರದಿಗಾರನ ಮೇಲೆ ಹಲ್ಲೆ ನಡೆಸಿದ್ದಾರೆ.
ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ  ಬಿ.ಎಸ್.ನಾಗೇಶ್ ಅಲಿಯಾಸ್ ಬಾವಿಕಟ್ಟೆ ನಾಗಣ್ಣ  ಮತ್ತು ಅವರ ಆಪ್ತ ರವಿಶಂಕರ್, ಬಿಜೆಪಿ ಜಿಲ್ಲಾ ಘಟಕದ ‍ಪ್ರಧಾನ ಕಾರ್ಯದರ್ಶಿ ಸೇರಿ ಟಿವಿ ವರದಿಗಾರ  ವಾಗೀಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಉಡುಪಿ ಹೋಟೆಲ್‌ನಲ್ಲಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಜಿ. ಬಿ. ಜ್ಯೋತಿಗಣೇಶ್ ಅವರೊಂದಿಗಿನ ಸಂದರ್ಶನ ಮುಗಿದ ಕೆಲವೇ ಸಮಯದಲ್ಲಿ ಘಟನೆ ನಡೆದಿದೆ.
"ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಬಾವಿಕಟ್ಟೆ ನಾಗಣ್ಣ,  ಬಿಜೆಪಿ ಜಿಲ್ಲಾ ಘಟಕದ ‍ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿಶಂಕರ್ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ" ಎಂದು ಬಿಟಿವಿ ನ್ಯೂಸ್ ವರದಿಗಾರ ವಾಗೀಶ್ ತುಮಕೂರಿನ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. "ಬಿ.ಜಿ.ಜ್ಯೋತಿಗಣೇಶ್ ಅವರ ಪತ್ರಿಕಾಗೋಷ್ಠಿ ಗೆ ತೆರಳಿದ್ದ ನನ್ನ ಮೇಲೆ ಹಲ್ಲೆ ನಡೆದಿದೆ. 'ಇಲ್ಲ ಸಲ್ಲದ ವರದಿ ಪ್ರಸಾರ ಮಾಡುತ್ತೀಯೆ' ಎಂದು ನಾಗಣ್ಣ ಹಾಗೂ ರವಿಶಂಕರ್ ನನಗೆ ಹೆದರಿಸಿ, ಜೀವಬೆದರಿಕೆ ಹಾಕಿದ್ದಾರೆ" ಎಂದು ವಾಗೀಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ "ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿದ ಬಳಿಕ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ "ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT