ನೀಲಮಣಿ ಎನ್ ರಾಜು 
ರಾಜ್ಯ

ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಸ್ವಾಗತ ಕೇಂದ್ರ ಸ್ಥಾಪನೆ

ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ಬೆಂಗಳೂರು: ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯಾಗಿ ಮಾಡುವ ಉದ್ದೇಶದಿಂದ 'ಜನ ಸ್ನೇಹಿ ಪೊಲೀಸ್ ಯೋಜನೆ' ಅಡಿ ಡಿಸೆಂಬರ್ 31ರೊಳಗೆ ಎಲ್ಲಾ ಪೊಲೀಸ್ ಠಾಣೆಯಲ್ಲಿ ಸ್ವಾಗತ ಕೇಂದ್ರ ಸ್ಥಾಪಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸ್ವಾಗತಕಾರರ ಕೇಂದ್ರ ಸ್ಥಾಪಿಸಿದ ಬಗ್ಗೆ ಫೋಟೋ ಸಮೇತ ವರದಿ ಮಾಡುವಂತೆ ಸೂಚಿಸಿದ್ದಾರೆ.
ಪೊಲೀಸ್‌ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇರಬಹುದಾದ ಅಪನಂಬಿಕೆ ತೊಡೆದು ಹಾಕಿ ಅವರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಠಾಣೆಯಲ್ಲಿ 3ರಿಂದ 4 ಸಿಬ್ಬಂದಿಗೆ ಮೃದು ಕೌಶಲ್ಯಗಳ ಬಗ್ಗೆ ಎರಡು ದಿನ ತರಬೇತಿ ನೀಡಲಾಗುತ್ತಿದೆ.
ಪ್ರತಿ ಸ್ವಾಗತ ಕೇಂದ್ರದಲ್ಲಿ ‘May I Help You’ ಎಂಬ ಬೋರ್ಡ್ ಅನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಹಾಕಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT