ನೀಲಮಣಿ ಎನ್ ರಾಜು 
ರಾಜ್ಯ

ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಸ್ವಾಗತ ಕೇಂದ್ರ ಸ್ಥಾಪನೆ

ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ಬೆಂಗಳೂರು: ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯಾಗಿ ಮಾಡುವ ಉದ್ದೇಶದಿಂದ 'ಜನ ಸ್ನೇಹಿ ಪೊಲೀಸ್ ಯೋಜನೆ' ಅಡಿ ಡಿಸೆಂಬರ್ 31ರೊಳಗೆ ಎಲ್ಲಾ ಪೊಲೀಸ್ ಠಾಣೆಯಲ್ಲಿ ಸ್ವಾಗತ ಕೇಂದ್ರ ಸ್ಥಾಪಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸ್ವಾಗತಕಾರರ ಕೇಂದ್ರ ಸ್ಥಾಪಿಸಿದ ಬಗ್ಗೆ ಫೋಟೋ ಸಮೇತ ವರದಿ ಮಾಡುವಂತೆ ಸೂಚಿಸಿದ್ದಾರೆ.
ಪೊಲೀಸ್‌ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇರಬಹುದಾದ ಅಪನಂಬಿಕೆ ತೊಡೆದು ಹಾಕಿ ಅವರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಠಾಣೆಯಲ್ಲಿ 3ರಿಂದ 4 ಸಿಬ್ಬಂದಿಗೆ ಮೃದು ಕೌಶಲ್ಯಗಳ ಬಗ್ಗೆ ಎರಡು ದಿನ ತರಬೇತಿ ನೀಡಲಾಗುತ್ತಿದೆ.
ಪ್ರತಿ ಸ್ವಾಗತ ಕೇಂದ್ರದಲ್ಲಿ ‘May I Help You’ ಎಂಬ ಬೋರ್ಡ್ ಅನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಹಾಕಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT