ಬಿಬಿಎಂಪಿ ಮೇಯರ್ ಸಂಪತ್ ರಾಜ್ ಲಂದನ್ ನ ಮೇಯರ್ ಸಾಧಿಕ್ ಖಾನ್ ಅವರನ್ನು ಸ್ವಾಗತಿಸಿದರು 
ರಾಜ್ಯ

ವಾಯು ಗುಣಮಟ್ಟ ಸುಧಾರಣೆ: ಬಿಬಿಎಂಪಿ-‘ಸಿ40’ ಒಪ್ಪಂದಕ್ಕೆ ಬೆಂಗಳೂರು, ಲಂಡನ್ ಮೇಯರ್ ಸಹಿ

ಹವಾಮಾನ ವೈಪರೀತ್ಯ ಪರಿಹಾರಕ್ಕೆ ಹಾಗೂ ಹಸಿರುಮನೆ ಪರಿಣಾಮವನ್ನು ಕಡಿತಗೊಳಿಸಲು ಶ್ರಮಿಸುತ್ತಿರುವ ‘ಸಿ40 ಸಿಟೀಸ್ ಕ್ಲೈಮೆಟ್‌ ಲೀಡರ್‌ಶಿಪ್‌ ಗ್ರೂಪ್‌’ನ .......

ಬೆಂಗಳೂರು: ಹವಾಮಾನ ವೈಪರೀತ್ಯ ಪರಿಹಾರಕ್ಕೆ ಹಾಗೂ ಹಸಿರುಮನೆ ಪರಿಣಾಮವನ್ನು ಕಡಿತಗೊಳಿಸಲು ಶ್ರಮಿಸುತ್ತಿರುವ ‘ಸಿ40 ಸಿಟೀಸ್ ಕ್ಲೈಮೆಟ್‌ ಲೀಡರ್‌ಶಿಪ್‌ ಗ್ರೂಪ್‌’ನ ‘ಸಿ40 ವಾಯುಗುಣಮಟ್ಟ ಜಾಲದ ಒಪ್ಪಂದಕ್ಕೆ ಬೆಂಗಳೂರಿನ ಮೇಯರ್‌ ಆರ್‌.ಸಂಪತ್‌ ರಾಜ್‌  ಮತ್ತು ಲಂಡನ್‌ ಮೇಯರ್ ಸಾದಿಕ್‌ ಖಾನ್‌ ಅವರುಗಳು ಸಹಿ ಹಾಕಿದ್ದಾರೆ.
ಇದರಲ್ಲಿ ಈ ವರೆಗೆ ಜಗತ್ತಿನ 20 ಮಹಾನಗರಗಳು ಸದಸ್ಯತ್ವ ಪಡೆದುಕೊಂಡಿದ್ದು ಇದರಲ್ಲಿ ದೇಶದ ದೆಹಲಿ, ಮುಂಬೈ, ಚೆನ್ನೈ, ಜೈಪುರ, ಕೋಲ್ಕತ್ತ ನಗರಗಳು ಸೇರಿವೆ. ಪ್ರಸ್ತುತ ಈ ಜಾಲಕ್ಕೆ ಲಂಡನ್‌ ಮತ್ತು ಬೆಂಗಳೂರಿನ ಮೇಯರ್‌ ಗಳು ಮುಖ್ಯಸ್ಥರಾಗಿರುತ್ತಾರೆ. ಈ ನಗರಗಳು ತಾಪಮಾನ ಬದಲಾವಣೆ ಹಾಗೂ ವಾಯು ಗುಣಮಟ್ಟ ಸುಧಾರಣೆಗೆ ಹೊಸ ಆಲೋಚನೆ ಹಾಗೂ ಉಪಾಯಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುತ್ತವೆ.
"1985ರಲ್ಲಿ ಬೆಂಗಳೂರಿನ ಜನಸಂಖ್ಯೆ  35 ಲಕ್ಷ ಇತ್ತು. ಈಗ 1.10 ಕೋಟಿಗೆ ಮುಟ್ಟಿದೆ. ತ್ವರಿತಗತಿಯ ಬೆಳವಣಿಗೆಯಿಂದಾಗಿ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ವಾಹನ ದಟ್ಟಣೆ, ನಿರ್ಮಾಣ ಕಾಮಗಾರಿ ಹೆಚ್ಚಾಗಿರುವುದು  ವಾಯು ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ. ಬಿಬಿಎಂಪಿಯು ಸಿ40 ಜಾಲದೊಡನೆ ಅನೇಕ ವರ್ಷಗಳಿಂದ ಸಂವಹನ ನಡೆಸುತ್ತಿದೆ. ಲಂಡನ್‍ ನೊಂದಿಗೆ ಸಿ40 ವಾಯು ಗುಣಮಟ್ಟ ಜಾಲದ ಸಹ ನಾಯಕತ್ವ ವಹಿಸಲು ನಾವು ಆಸಕ್ತರಾಗಿದ್ದೇವೆ. ಈ ಮೂಲಕ ವಿಶ್ವದ ನಾನಾ ಮಹಾನಗರಗಳ ಮೇಯರ್ ಗಳು ಸೇರಿ ವಾಯು ಮಾಲಿನ್ಯ ತಡೆಗಟ್ಟಲು ಶ್ರಮಿಸುತ್ತೇವೆ." ಒಪ್ಪಂದಕ್ಕೆ ಸಹಿ ಹಾಕಿದ ಮೇಯರ್ ಸಂಪತ್ ರಾಜ್ ಹೇಳಿದ್ದಾರೆ.
"ಜಾಗತಿಕ ತಾಪಮಾನದಿಂದ ಜನರ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾದರೆ ಎಲ್ಲ ಮಹಾನಗರಗಳು ಒಂದಾಗಬೇಕು. ಲಂಡನ್ ನಲ್ಲಿ ಮಾಲಿನ್ಯ ಉಂಟು ಮಾಡುವ ಕಾರ್ ಗಳಿಗೆ ವಿಷಾಂಶ ಶುಲ್ಕ ವಿಧಿಸುತ್ತೇವೆ, ವಿಷಯುಕ್ತ ಗಾಳಿಯನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಂಡಿದ್ದೇವೆ. ಅಲ್ಲಿನ ಬಸ್ ಟ್ಯಾಕ್ಸಿಗಳನ್ನು ಸ್ವಚ್ಚ ಮಾಡಲು ಆಲ್ಟ್ರಾ ಲೋ ಎಮಿಷನ್‌ ಜೋನ್‌ ಬಳಸುತ್ತೇವೆ".ಎಂದು ಲಂಡನ್ ಮೇಯರ್ ಸಾದಿಕ್ ಖಾನ್ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ಸುದೀರ್ಘ ಚರ್ಚೆ ನಡೆಸುವ ಉದ್ದೇಶದಿಂದ  2018ರ ಮಾರ್ಚ್‌ನಲ್ಲಿ ಜಾಗತಿಕ ಮಟ್ಟದ ಕಾರ್ಯಾಗಾರ ನಡೆಸಲು ಬಿಬಿಎಂಪಿ ತೀರ್ಮಾನಿಸಿದೆ. ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

ಮುಂಬೈ ಮೇಯರ್ ಹಿಂದೂ-ಮರಾಠಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್

SCROLL FOR NEXT