ರಾಜ್ಯ

ಸರ್ಕಾರಿ ಭೂಮಿ ಕಬಳಿಕೆ, ಸಚಿವ ಜಾರ್ಜ್ ವಿರುದ್ಧ ದೂರು ದಾಖಲು

Raghavendra Adiga
ಬೆಂಗಳೂರು:  ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಕೇಳಿಬಂದಿದೆ. 
ಇದರ ಸಂಬಂಧ ಬಿಜೆಪಿ ಮುಖಂಡ  ಎನ್ ಆರ್ ರಮೇಶ್ ಜಾರ್ಜ್ ವಿರುದ್ಧ ಲೋಕಾಯುಕ್ತ, ಎಸಿಬಿ ಹಾಗೂ ಬಿಎಂಟಿಎಫ್ ನಲ್ಲಿ ದೂರು ದಾಖಲಿಸಿದ್ದಾರೆ. 
ಜಾರ್ಜ್ ಪಾಲುದಾರಿಕೆಯ ಎಂಬೆಸಿ ಗಾಲ್ಫ್  ಲಿಂಕ್ ಟೆಕ್ ಪಾರ್ಕ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿಯನ್ನು ಕಬಳಿಸಿರುವುದಾಗಿ ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ೈದಕ್ಕೆ ಸಂಬಂಧಿಸಿದಂತೆ 600 ಪುಟಗಳ ದಾಖಲೆ ಬಿಡುಗಡೆ ಮಾಡಿದ ಅವರು ಜಾರ್ಜ್, ಟೆಕ್ ಪಾರ್ಕ್ ಹೆಸರಿನಲ್ಲಿ . 52.03 ಎಕರೆ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ  ಎಂದು ಗಂಭೀರ  ಆರೋಪ ಮಾಡಿದ್ದಾರೆ.
SCROLL FOR NEXT