ಹೊನ್ನಾವರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊನ್ನಾವರ ಬಸ್ ನಿಲ್ದಾಣ ಸಮೀಪ ನಡೆದ ಗಲಭೆ 
ರಾಜ್ಯ

ಸಿಎಂ ಹೊನ್ನಾವರ ಭೇಟಿ; ಕೋಮು ಗಲಭೆ, ಇಬ್ಬರಿಗೆ ಗಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಹೊನ್ನಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕೋಮು ....

ಹೊನ್ನಾವರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೊನ್ನಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕೋಮು ಘರ್ಷಣೆಯುಂಟಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಒಂದು ಕೋಮಿನ ಯುವಕನ ದ್ವಿಚಕ್ರ ವಾಹನಕ್ಕೆ ಇನ್ನೊಂದು ಕೋಮಿನ ಆಟೋ ಚಾಲಕ ಆಟೋ ಡಿಕ್ಕಿ ಹೊಡೆಸಿದ ಸಂಬಂಧ ಎರಡು ಕೋಮುಗಳ ಯುವಕರು ಕಲ್ಲುತೂರಾಟ ನಡೆಸಿ ದೊಣ್ಣೆಗಳನ್ನ ಹಿಡಿದು ಹೊಡೆದಾಡಿಕೊಂಡ ಘಟನೆ ಹೊನ್ನಾವರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗಲಭೆಯಲ್ಲಿ ಗಾಯಗೊಂಡ ಶರತ್ ಮಹಾಲೆ ಮತ್ತು ನರಸಿಂಹ ಮೇಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಟೆಂಪೋಗಳ ಗಾಜುಗಳು ಪುಡಿ ಪುಡಿಯಾಗಿವೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗಲಭೆ ನಿರತ ಹತ್ತಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಗಲಭೆ ನಿಯಂತ್ರಣಕ್ಕೆ ಬಂದಿದ್ದು ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಾಕಾಬಂದಿ ಹಾಕಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. 
ಮೂರು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಚಂದಾವರದಲ್ಲಿ ಧ್ವಜ ನೆಡುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಗಲಭೆಯುಂಟಾಗಿ 27 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT