ಕಾಗೋಡು ತಿಮ್ಮಪ್ಪ 
ರಾಜ್ಯ

ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿಯಲ್ಲಿನ ಅಕ್ರಮ ಮನೆಗಳ ಸಕ್ರಮ: ಕಾಗೋಡು ತಿಮ್ಮಪ್ಪ

ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿಯಲ್ಲಿ ಆಕ್ರಮವಾಗಿ ಕಟ್ಟಿರುವ ಮನೆಗಳನ್ನು....

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿಯಲ್ಲಿ ಆಕ್ರಮವಾಗಿ ಕಟ್ಟಿರುವ ಮನೆಗಳನ್ನು ಮಾರ್ಚ್ ಅಂತ್ಯದೊಳಗಾಗಿ ಸಕ್ರಮಗೊಳಿಸಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಇಪ್ಪತ್ತೈದು ಲಕ್ಷ ಮಂದಿ ಸರ್ಕಾರಿ ಭೂಮಿಯಲ್ಲಿ ಆಕ್ರಮವಾಗಿ ಮನೆ ಕಟ್ಟಿಕೊಂಡಿದ್ದಾರೆ ಎಂಬ ಅಂದಾಜಿದ್ದು, ಮಾರ್ಚ್ ಅಂತ್ಯದೊಳಗಾಗಿ ಅವರೆಲ್ಲರಿಗೂ ವಾಸಿಸುತ್ತಿರುವ ಮನೆಯ ಹಕ್ಕು ಪತ್ರಗಳನ್ನು ನೀಡಲಾಗುವುದು ಎಂದು ಹೇಳಿದರು.
ಆಕ್ರಮ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಪುನ: ವಿಸ್ತರಿಸಲಾಗಿದ್ದು ಫೆಬ್ರವರಿ ಅಂತ್ಯದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು. 
ಗ್ರಾಮೀಣ ಅಕ್ರಮ-ಸಕ್ರಮ (94ಸಿ), ಬಗರ್‌ಹುಕುಂ ಸಾಗುವಳಿ ಚೀಟಿ, ವಾಸಿಸುವವನೇ ಮನೆಯೊಡೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಮಾರ್ಚ್ 31ರ ಗಡುವು ವಿಧಿಸಲಾಗಿದೆ ಎಂದು ಕೂಡ ಹೇಳಿರುವ ಕಾಗೋಡು ತಿಮ್ಮಪ್ಪ, ಈ ನಿಟ್ಟಿನಲ್ಲಿ ಜಿಲ್ಲಾವಾರು ಸಭೆಗಳನ್ನು ನಡೆಸಲು ಇದೇ 15ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!