ಕಾಸರಗೋಡು: ಮಂಡ್ಯ ಅಯ್ಯಪ್ಪ ಭಕ್ತರ ಬಸ್ ಮೇಲೆ ಕಲ್ಲು ತೂರಾಟ, ಬಸ್ ಮುಂಭಾಗದ ಗಾಜು ಜಖಂ 
ರಾಜ್ಯ

ಕಾಸರಗೋಡು: ಮಂಡ್ಯ ಅಯ್ಯಪ್ಪ ಭಕ್ತರ ಬಸ್ ಮೇಲೆ ಕಲ್ಲು ತೂರಾಟ, ಬಸ್ ಮುಂಭಾಗದ ಗಾಜು ಜಖಂ

ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರ ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಸರಗೋಡು: ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರ ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಸದ್ಯ ಮಂಡ್ಯದ  ಭಕ್ತರಿಗೆ ಕಾಸರಗೋಡಿನ ಅಯ್ಯಪ್ಪ ಸೇವಾ ಸಂಘದಲ್ಲಿ ಆಶ್ರಯ ನೀಡಲಾಗಿದೆ.
ಕರಾಳ ದಿನ ಆಚರಣೆ 
ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಕರಾಳ ದಿನ ಆಚರಿಸಲಾಗಿದೆ. ಈ ವೇಳೆ ಕರ್ನಾಟಕದಿಂದ ಕೇರಳ ಹಾಗೂ ಕೇರಳದಿಂದ ಕರ್ನಾಟಕದತ್ತ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್, ಇತರೆ ವಾಹನಗಳ ಮೇಲೆ  ಕಲ್ಲು ತೂರಾಟ ನಡೆದಿದೆ. ಕರಾಳ ದಿನ ಹಿನ್ನೆಲೆಯಲ್ಲಿ   ಮುಸ್ಲಿಮ್ ಸಂಘಟನೆಯೊಂದರ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT