ಅನಂತ್ ಕುಮಾರ್ ಹೆಗಡೆ 
ರಾಜ್ಯ

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್

ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ.......

ಮೈಸೂರು: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅವರ ವಿರುದ್ಧ ಮೈಸೂರು ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರು ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಸವರಾಜ ನಾಯ್ಕ ರಿಂದ ಸಲ್ಲಿಸಲಾದ ಅರ್ಜಿಯೊಂದನ್ನು ಅನುಸರಿಸಿ ಪೋಲೀಸರು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿದೆ. ನವೆಂಬರ್ 25 ರಂದು ದೇವರಾಜ ಪೊಲೀಸ್ ಠಾಣೆಯಲ್ಲಿ ನಾಯ್ಕ, ಹೆಗಡೆ ವಿರುದ್ಧ ದೂರು ಸಲ್ಲಿಸಿದ್ದರು. ಪೊಲೀಸ್ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪಾಳ್ಯ ಸುರೇಶ್ ನೇತೃತ್ವದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ವಕೀಲರ ಸಮಿತಿಯು ನವೆಂಬರ್ 30 ರಂದು ನಾಲ್ಕನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದೆ. 
ಫಿರ್ಯಾದಿ ಪರವಾಗಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೂರುಗಳ ಆಧಾರದ ಮೇಲೆ ಮತ್ತಷ್ಟು ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ  ನಿರ್ದೇಶನ ನೀಡಿದರು. ಅಂತೆಯೇ, ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 504 ಅಡಿಯಲ್ಲಿ ಸಂಸದರ ವಿರುದ್ಧ ಎಫ್ ಐಆರ್ (ಸಂಖ್ಯೆ-230/2017) ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT