ಮಯೂರ ವರ್ಮ ವೇದಿಕೆಯಲ್ಲಿ ಜಮಾಯಿಸಿದ ಜನರು 
ರಾಜ್ಯ

ವರ್ಣರಂಜಿತವಾಗಿ ಆರಂಭಗೊಂಡ ಕರಾವಳಿ ಉತ್ಸವ

ಮೂರು ದಿನಗಳ ಕರಾವಳಿ ಉತ್ಸವ ಕಾರವಾರದಲ್ಲಿ ನಿನ್ನೆ ಆರಂಭವಾಗಿದೆ. ನೂರಾರು ಕಲಾವಿದರು ....

ಕಾರವಾರ: ಮೂರು ದಿನಗಳ ಕರಾವಳಿ ಉತ್ಸವ ಕಾರವಾರದಲ್ಲಿ ನಿನ್ನೆ ಆರಂಭವಾಗಿದೆ. ನೂರಾರು ಕಲಾವಿದರು ಉತ್ಸವದಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ನಿನ್ನೆ ಅಪರಾಹ್ನ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಜಿಲ್ಲಾ ರಂಗಮಂದಿರದಲ್ಲಿ ನಗೆ ಹಬ್ಬ ಕಾರ್ಯಕ್ರಮ ನಡೆಯಿತು.
ಕಮಾಂಡರ್ ಅಡ್ಮರಲ್ ಕೆ.ಜೆ.ಕುಮಾರ್, ರವೀಂದ್ರ ನಾಥ ಠಾಕೋರ್ ಬೀಚ್ ಹತ್ತಿರ ವಾರ್ ಶಿಪ್ ಮ್ಯೂಸಿಯಮ್ ಗಾರ್ಡನ್ ಬಳಿ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.
ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ್ ನಾಯಕ್ ಉಪಸ್ಥಿತರಿದ್ದರು.
ಹೂವುಗಳಿಂದ ವಿನ್ಯಾಸಗೊಳಿಸಿದ ಜಿರಾಫೆ, ನವಿಲು, ಸುಖೊಯ್ ಯುದ್ಧ ವಿಮಾನ, ಹೂವಿನಿಂದ ನಿರ್ಮಿಸಲಾದ ಹೃದಯ ವಿನ್ಯಾಸ, ಹಾರ್ನ್ಬಿಲ್ ಜನರನ್ನು ಆಕರ್ಷಿಸಿದವು. ಕಾರವಾರದ ಹತ್ತಿರ ಸದಾಶಿವಗಡದ ಹಣ್ಣಿನ ವಿನ್ಯಾಸದ ಕಲಾವಿದರು ಹಣ್ಣಿನಲ್ಲಿ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗ್ಡೆ, ಪ್ರಧಾನಿ ನರೇಂದ್ರ ಮೋದಿಯವರನ್ನು ವಿನ್ಯಾಸಗೊಳಿಸಿದ್ದಾರೆ. ಅದು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸಿದೆ. 
ಮಹಿಳೆಯರಿಗೆ ರಂಗೋಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು 40ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT