ಮಯೂರ ವರ್ಮ ವೇದಿಕೆಯಲ್ಲಿ ಜಮಾಯಿಸಿದ ಜನರು 
ರಾಜ್ಯ

ವರ್ಣರಂಜಿತವಾಗಿ ಆರಂಭಗೊಂಡ ಕರಾವಳಿ ಉತ್ಸವ

ಮೂರು ದಿನಗಳ ಕರಾವಳಿ ಉತ್ಸವ ಕಾರವಾರದಲ್ಲಿ ನಿನ್ನೆ ಆರಂಭವಾಗಿದೆ. ನೂರಾರು ಕಲಾವಿದರು ....

ಕಾರವಾರ: ಮೂರು ದಿನಗಳ ಕರಾವಳಿ ಉತ್ಸವ ಕಾರವಾರದಲ್ಲಿ ನಿನ್ನೆ ಆರಂಭವಾಗಿದೆ. ನೂರಾರು ಕಲಾವಿದರು ಉತ್ಸವದಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ನಿನ್ನೆ ಅಪರಾಹ್ನ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಜಿಲ್ಲಾ ರಂಗಮಂದಿರದಲ್ಲಿ ನಗೆ ಹಬ್ಬ ಕಾರ್ಯಕ್ರಮ ನಡೆಯಿತು.
ಕಮಾಂಡರ್ ಅಡ್ಮರಲ್ ಕೆ.ಜೆ.ಕುಮಾರ್, ರವೀಂದ್ರ ನಾಥ ಠಾಕೋರ್ ಬೀಚ್ ಹತ್ತಿರ ವಾರ್ ಶಿಪ್ ಮ್ಯೂಸಿಯಮ್ ಗಾರ್ಡನ್ ಬಳಿ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.
ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ್ ನಾಯಕ್ ಉಪಸ್ಥಿತರಿದ್ದರು.
ಹೂವುಗಳಿಂದ ವಿನ್ಯಾಸಗೊಳಿಸಿದ ಜಿರಾಫೆ, ನವಿಲು, ಸುಖೊಯ್ ಯುದ್ಧ ವಿಮಾನ, ಹೂವಿನಿಂದ ನಿರ್ಮಿಸಲಾದ ಹೃದಯ ವಿನ್ಯಾಸ, ಹಾರ್ನ್ಬಿಲ್ ಜನರನ್ನು ಆಕರ್ಷಿಸಿದವು. ಕಾರವಾರದ ಹತ್ತಿರ ಸದಾಶಿವಗಡದ ಹಣ್ಣಿನ ವಿನ್ಯಾಸದ ಕಲಾವಿದರು ಹಣ್ಣಿನಲ್ಲಿ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗ್ಡೆ, ಪ್ರಧಾನಿ ನರೇಂದ್ರ ಮೋದಿಯವರನ್ನು ವಿನ್ಯಾಸಗೊಳಿಸಿದ್ದಾರೆ. ಅದು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸಿದೆ. 
ಮಹಿಳೆಯರಿಗೆ ರಂಗೋಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು 40ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT