ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಶಿರಸಿ ಹಿಂಸಾಚಾರ: ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ- ಕುಮಾರಸ್ವಾಮಿ ವಾಗ್ದಾಳಿ

ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣವನ್ನೇ ದೊಡ್ಡದು ಮಾಡಲಾಗುತ್ತಿದ್ದು ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ...

ಬೆಂಗಳೂರು: ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣವನ್ನೇ ದೊಡ್ಡದು ಮಾಡಲಾಗುತ್ತಿದ್ದು ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಶಿರಸಿಯಲ್ಲಿ ಉಂಟಾದ ಹಿಂಸಾಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ರಾಷ್ಟ್ರೀಯ ಪಕ್ಷಗಳು ಜನರಲ್ಲಿ ಭಯಭೀತಿ ಹುಟ್ಟಿಸುವಂತಹ ವಾತಾವರಣ ಸೃಷ್ಟಿ ಮಾಡುತ್ತಿವೆ. ಸಣ್ಣ ಘಟನೆಗಳನ್ನೇ ದೊಡ್ಡದು ಮಾಡುತ್ತಿದ್ದು ಇದರಲ್ಲಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಹಿಂಸಾಚಾರದ ಹಿನ್ನೆಲೆಯಲ್ಲಿ ನಾನು ಹಿಂದೂ ಸಂಘಟನೆಗಳು ಹಾಗೂ ಮುಸ್ಲಿಂರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದು ರಾಷ್ಟ್ರೀಯ ಪಕ್ಷಗಳ ಚಿತಾವಣೆಯಿಂದ ಶಾಂತಿ ವಾತಾವರಣ ಕಲುಷಿತಗೊಳಿಸುತ್ತಿವೆ. ಹೀಗಾಗಿ ಇಂತಹ ಚಿತಾವಣೆಗೆ ಬಲಿಯಾಗಬೇಡು ಎಂದು ಹೇಳಿದ್ದಾರೆ. 
ಇನ್ನು ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಳ್ಳುತ್ತಿದ್ದು ಇಷ್ಟೆಲ್ಲಾ ಆದರೂ ಈ ಸರ್ಕಾರ ಏನು ಮಾಡುತ್ತಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ತಪ್ಪಿದೆ. ಕುಮಟಾದಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT