ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಶಿರಸಿ ಹಿಂಸಾಚಾರ: ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ- ಕುಮಾರಸ್ವಾಮಿ ವಾಗ್ದಾಳಿ

ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣವನ್ನೇ ದೊಡ್ಡದು ಮಾಡಲಾಗುತ್ತಿದ್ದು ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ...

ಬೆಂಗಳೂರು: ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣವನ್ನೇ ದೊಡ್ಡದು ಮಾಡಲಾಗುತ್ತಿದ್ದು ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಶಿರಸಿಯಲ್ಲಿ ಉಂಟಾದ ಹಿಂಸಾಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ರಾಷ್ಟ್ರೀಯ ಪಕ್ಷಗಳು ಜನರಲ್ಲಿ ಭಯಭೀತಿ ಹುಟ್ಟಿಸುವಂತಹ ವಾತಾವರಣ ಸೃಷ್ಟಿ ಮಾಡುತ್ತಿವೆ. ಸಣ್ಣ ಘಟನೆಗಳನ್ನೇ ದೊಡ್ಡದು ಮಾಡುತ್ತಿದ್ದು ಇದರಲ್ಲಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಹಿಂಸಾಚಾರದ ಹಿನ್ನೆಲೆಯಲ್ಲಿ ನಾನು ಹಿಂದೂ ಸಂಘಟನೆಗಳು ಹಾಗೂ ಮುಸ್ಲಿಂರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದು ರಾಷ್ಟ್ರೀಯ ಪಕ್ಷಗಳ ಚಿತಾವಣೆಯಿಂದ ಶಾಂತಿ ವಾತಾವರಣ ಕಲುಷಿತಗೊಳಿಸುತ್ತಿವೆ. ಹೀಗಾಗಿ ಇಂತಹ ಚಿತಾವಣೆಗೆ ಬಲಿಯಾಗಬೇಡು ಎಂದು ಹೇಳಿದ್ದಾರೆ. 
ಇನ್ನು ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಳ್ಳುತ್ತಿದ್ದು ಇಷ್ಟೆಲ್ಲಾ ಆದರೂ ಈ ಸರ್ಕಾರ ಏನು ಮಾಡುತ್ತಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ತಪ್ಪಿದೆ. ಕುಮಟಾದಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT