ಪರೇಶ್ ಮೇಸ್ತಾ 
ರಾಜ್ಯ

ನನಗೆ ಸಚಿವರು ನೀಡುವ ಪರಿಹಾರ ಬೇಕಿಲ್ಲ, ನ್ಯಾಯ ಬೇಕು: ಪರೇಶ್ ಮೇಸ್ತಾ ತಂದೆ

ಉತ್ತರ ಕನ್ನಡದ ಜಿಲ್ಲೆಯಲ್ಲಿ ಹತ್ಯೆಯಾಗಿದ್ದ ಯುವಕ ಪರೇಶ್ ಮೇಸ್ತಾ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ್ದು, ನಮಗೆ ಸಚಿವರು ನೀಡಿರುವ ಪರಿಹಾರ ಧನ ಬೇಡ....

ಕಾರ್ವಾರ: ಉತ್ತರ ಕನ್ನಡದ ಜಿಲ್ಲೆಯಲ್ಲಿ ಹತ್ಯೆಯಾಗಿದ್ದ ಯುವಕ ಪರೇಶ್ ಮೇಸ್ತಾ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ್ದು, ನಮಗೆ ಸಚಿವರು ನೀಡಿರುವ ಪರಿಹಾರ ಧನ ಬೇಡ, ನ್ಯಾಯ ಬೇಕು ಎಂದು ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ್ ಮೇಸ್ತಾ ಹೇಳಿದ್ದಾರೆ. 
ಹೊನ್ನಾವರದಲ್ಲಿ ಮಾತನಾಡಿರುವ ಕಮಲಾಕರ್ ಮೇಸ್ತಾ, ಪರೇಶ್ ಮೇಸ್ತಾ ಮೀನುಗಾರಿಕೆ ಸಮುದಾಯದ ಧೈರ್ಯವಂತ ಬಾಲಕನಾಗಿದ್ದ, ಆತನಿಗೆ ಈಜು ಚೆನ್ನಾಗಿ ಬರುತ್ತಿತ್ತು. ಆತ ನೀರಿನಲ್ಲಿ ಮುಳುಗಿರುವುದನ್ನು ಕೇಳಿ ಅಚ್ಚರಿಯಾಯಿತು. ಪರೇಶ್ ಮೇಸ್ತಾನದ್ದು ಸಹಜ ಸಾವಲ್ಲ ಎಂದು ಹೇಳಿದ್ದಾರೆ. 
ಪರೇಶ್ ಮೇಸ್ತಾನದ್ದು ಹತ್ಯೆ, ಆದರೆ ಪೊಲೀಸರು ಅದನ್ನು ಮುಚ್ಚಿಹಾಜಲು ಯತ್ನಿಸುತ್ತಿದ್ದಾರೆ. ಸಚಿವ ದೇಶಪಾಂಡೆ ಹಾಗೂ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧವೂ ಆರೋಪ ಮಾಡಿರುವ ಕಮಲಾಕರ್ ಮೇಸ್ತಾ, ಇಬ್ಬರೂ ಗೊಂದಲ ಉಂಟು ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪೊಲೀಸ್ ತನಿಖೆ ಮೇಲೆ ನಮಗೆ ವಿಶ್ವಾಸವಿಲ್ಲ. ನಮಗೆ ನ್ಯಾಯ ಬೇಕು ಎಂದು ಹೇಳಿದ್ದು, ಪರೇಶ್ ಮೇಸ್ತಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಆತನೊಬ್ಬ ಧೈರ್ಶಶಾಲಿ ಹಿಂದೂ ಆಗಿದ್ದ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!

ಹೀನಾ ಬಂಗಾರದ ಬೇಟೆ: 40 ಚಿನ್ನದ ಪದಕಗಳೊಂದಿಗೆ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನದಲ್ಲಿ ಭಾರತ!

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

SCROLL FOR NEXT