ಹರದೀಪ್ ಸಿಂಗ್ ಪುರಿ 
ರಾಜ್ಯ

ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಸಚಿವ ಹರದೀಪ್ ಸಿಂಗ್ ಪುರಿ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ .....

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ 349 ಮನೆ ನಿರ್ಮಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸ್ವಂತ ಸೂರು ಇಲ್ಲದ ಬಡವರಿಗೆ ಮನೆ ನಿರ್ಮಿಸಲು ರಾಜ್ಯ ಸರಕಾರ ಪ್ರಸ್ತಾವನೆ ಕಳಿಸಿದರೆ ಕೇಂದ್ರ ಸರ್ಕಾರ ಅದನ್ನು ಪುರಸ್ಕರಿಸಲಿದೆ ಎಂದು ಹೇಳಿದರು.
`ಅಮೃತ್’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಗತಿಗೆ ಸಮಾಧಾನ ವ್ಯಕ್ತಪಡಿಸಿರುವ ಅವರು, ನಗರ ಪ್ರದೇಶಗಳಲ್ಲಿ ಹಸಿರು ವಲಯ ಹೆಚ್ಚಿಸಿ ಮಾಲಿನ್ಯ ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ 27 ನಗರಗಳಲ್ಲಿ ಅಮೃತ್ ಯೋಜನೆ ಜಾರಿಯಲ್ಲಿದ್ದು, ಇದಕ್ಕಾಗಿ ಕೇಂದ್ರ ಸರಕಾರ 4 ಸಾವಿರದ 953 ಕೋಟಿ ರೂಪಾಯಿ ಮೌಲ್ಯದ ಯೋಜನೆಗೆ ಅನುಮತಿ ನೀಡಿದೆ. ಜೊತೆಗೆ, 3 ಲಕ್ಷದ 64 ಸಾವಿರ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ 61 ಕೋಟಿ ರೂಪಾಯಿ ಒದಗಿಸಿದೆ ಎಂದು ಪುರಿ ತಿಳಿಸಿದರು.
ವಾಣಿಜ್ಯ ಮತ್ತು ವಸತಿ ಸೌಕರ್ಯಕ್ಕಾಗಿ 2030ರ ವೇಳೆಗೆ 700ರಿಂದ 900 ದಶಲಕ್ಷ ಚದರ ಮೀಟರ್‍ನಷ್ಟು ಸ್ಥಳಾವಕಾಶ ಒದಗಿಸಬೇಕಾಗಿದೆ; ಇದರ ಜೊತೆಗೆ, ದೇಶದ ರಿಯಲ್ ಎಸ್ಟೇಟ್ ವಲಯವು ಅಕ್ರಮ ಚಟುವಟಿಕೆಗಳನ್ನು ನಡೆಸದಂತೆ ಅಂಕುಶ ಹಾಕಬೇಕಾದ ಅಗತ್ಯವಿದೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT