ಹರದೀಪ್ ಸಿಂಗ್ ಪುರಿ 
ರಾಜ್ಯ

ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಸಚಿವ ಹರದೀಪ್ ಸಿಂಗ್ ಪುರಿ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ .....

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ 349 ಮನೆ ನಿರ್ಮಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸ್ವಂತ ಸೂರು ಇಲ್ಲದ ಬಡವರಿಗೆ ಮನೆ ನಿರ್ಮಿಸಲು ರಾಜ್ಯ ಸರಕಾರ ಪ್ರಸ್ತಾವನೆ ಕಳಿಸಿದರೆ ಕೇಂದ್ರ ಸರ್ಕಾರ ಅದನ್ನು ಪುರಸ್ಕರಿಸಲಿದೆ ಎಂದು ಹೇಳಿದರು.
`ಅಮೃತ್’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಗತಿಗೆ ಸಮಾಧಾನ ವ್ಯಕ್ತಪಡಿಸಿರುವ ಅವರು, ನಗರ ಪ್ರದೇಶಗಳಲ್ಲಿ ಹಸಿರು ವಲಯ ಹೆಚ್ಚಿಸಿ ಮಾಲಿನ್ಯ ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ 27 ನಗರಗಳಲ್ಲಿ ಅಮೃತ್ ಯೋಜನೆ ಜಾರಿಯಲ್ಲಿದ್ದು, ಇದಕ್ಕಾಗಿ ಕೇಂದ್ರ ಸರಕಾರ 4 ಸಾವಿರದ 953 ಕೋಟಿ ರೂಪಾಯಿ ಮೌಲ್ಯದ ಯೋಜನೆಗೆ ಅನುಮತಿ ನೀಡಿದೆ. ಜೊತೆಗೆ, 3 ಲಕ್ಷದ 64 ಸಾವಿರ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ 61 ಕೋಟಿ ರೂಪಾಯಿ ಒದಗಿಸಿದೆ ಎಂದು ಪುರಿ ತಿಳಿಸಿದರು.
ವಾಣಿಜ್ಯ ಮತ್ತು ವಸತಿ ಸೌಕರ್ಯಕ್ಕಾಗಿ 2030ರ ವೇಳೆಗೆ 700ರಿಂದ 900 ದಶಲಕ್ಷ ಚದರ ಮೀಟರ್‍ನಷ್ಟು ಸ್ಥಳಾವಕಾಶ ಒದಗಿಸಬೇಕಾಗಿದೆ; ಇದರ ಜೊತೆಗೆ, ದೇಶದ ರಿಯಲ್ ಎಸ್ಟೇಟ್ ವಲಯವು ಅಕ್ರಮ ಚಟುವಟಿಕೆಗಳನ್ನು ನಡೆಸದಂತೆ ಅಂಕುಶ ಹಾಕಬೇಕಾದ ಅಗತ್ಯವಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT