ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಬಳಕೆಯಾಗದ ರೂ. 406 ಕೋಟಿ ಶಾಸಕರ ನಿಧಿಯಿಂದ ಶಾಲಾ ಕೊಠಡಿ, ಅಂಗನವಾಡಿ ನಿರ್ಮಾಣ

ಬಳಸದೆ ಇರುವ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಹಣವನ್ನು ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಲು ಸಿದ್ದರಾಮಯ್ಯ ....

ಬೆಂಗಳೂರು: ಬಳಸದೆ ಇರುವ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಹಣವನ್ನು ಶಾಲೆ, ಅಂಗನವಾಡಿಗಳ ನಿರ್ಮಾಣ ಮತ್ತು ದುರಸ್ತಿಗೆ ಬಳಸಿಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧರಿಸಿದೆ.
ಸಿದ್ದು ಸರ್ಕಾರದ ನಡೆ ಸೇವೆಗಳ ಕಡೆ ಎಂಬ ಸರ್ಕಾರದ ಕಾರ್ಯಕ್ರಮವನ್ನು ಆರಂಭಿಸಿರುವ ರಾಜ್ಯ ಸರ್ಕಾರ ಶಾಸಕರ ನಿಧಿಯನ್ನು ಶಾಲೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಆರೋಗ್ಯ ಸೇವೆಗಳ ಸುಧಾರಣೆಗಳಿಗಾಗಿ ಬಳಸಿಕೊಳ್ಳಲಿದೆ.
ಜಿಲ್ಲಾಧಿಕಾರಿಗಳ ಖಾತೆಗಳಲ್ಲಿರುವ 406 ಕೋಟಿ ರೂಪಾಯಿ ಕಳೆದೊಂದು ದಶಕದಿಂದ ಖರ್ಚು ಮಾಡದೆ ಉಳಿದುಕೊಂಡಿದ್ದು ವಿಧಾನಸಭೆ ಚುನಾವಣೆ ಹತ್ತಿರ ಬರುವ ಹೊತ್ತಿಗೆ ಅಂದರೆ ಮಾರ್ಚ್ ಒಳಗೆ ಆ ಹಣವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. 
ನಿನ್ನೆ ಈ ವಿಷಯವನ್ನು ತಿಳಿಸಿದ ಸಾಂಖ್ಯಿಕ ಮತ್ತು ಯೋಜನೆ ಖಾತೆ ಸಚಿವ ಎಂ.ಆರ್.ಸೀತಾರಾಮ್, 2002ರಿಂದ 2013ರವರೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಇರುವ ಹಣವನ್ನು ಇದುವರೆಗೆ ಬಳಸಿರಲಿಲ್ಲ. ಇದೀಗ ಆ ಹಣವನ್ನು ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಮಧ್ಯೆ ನಿರ್ದಿಷ್ಟ ಯೋಜನೆಗಳಿಗೆ ಹಂಚಲಾಗುತ್ತದೆ. ಇದೇ ಮೊದಲ ಬಾರಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಹಣವನ್ನು ಪತ್ತೆಹಚ್ಚಲಾಗಿದೆ. ಮಾಜಿ ಶಾಸಕರುಗಳಿಗೆ ಈ ಹಣದ ಮೇಲೆ ಹಿಡಿತವಿರುವುದಿಲ್ಲ ಎಂದು ಹೇಳಿದರು.
ಸರ್ಕಾರಿ ಶಾಲೆಗಳ 2719 ತರಗತಿಗಳ ನಿರ್ಮಾಣ ಮತ್ತು ದುರಸ್ತಿಗೆ ಶಿಕ್ಷಣ ಇಲಾಖೆಗೆ ಸಿಂಹಪಾಲು 243 ಕೋಟಿ ರೂಪಾಯಿ ಸಿಕ್ಕಿದೆ. ಆರೋಗ್ಯ ಇಲಾಖೆಗೆ 309 ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 122 ಕೋಟಿ ರೂಪಾಯಿ ನೀಡಲಾಗಿದೆ. ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 346 ಅಂಗನವಾಡಿಗಳ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT