ಬೆಂಗಳೂರು: ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವು 
ರಾಜ್ಯ

ಬೆಂಗಳೂರು: ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವು

ಬೆಂಗಳೂರಿನ ನಾಯಂದಹಳ್ಳಿಯಲ್ಲಿರುವ ವಸತಿ ಸಮುಚ್ಚಯದಲ್ಲಿನ ಮೂರನೇ ಮಹಡಿಯಿಂದ ಬಿದ್ದು ಹದಿನೈದು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಶುಕ್ರವಾರ ಮದ್ಯಾಹ್ನ ನಡೆದಿದೆ.

ಬೆಂಗಳೂರು: ಬೆಂಗಳೂರಿನ ನಾಯಂದಹಳ್ಳಿಯಲ್ಲಿರುವ ವಸತಿ ಸಮುಚ್ಚಯದಲ್ಲಿನ ಮೂರನೇ ಮಹಡಿಯಿಂದ ಬಿದ್ದು ಹದಿನೈದು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಶುಕ್ರವಾರ ಮದ್ಯಾಹ್ನ ನಡೆದಿದೆ.
ನಾಲ್ಕಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗು ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದೆ. ಈ ನತದೃಷ್ಟ ಮಗುವನ್ನು ಮೈತ್ರಾ ಎಂದು ಗುರುತಿಸಿದ್ದು ರೇಣುಕೇಶ್ ಹಾಗೂ ಅನಿತಾ ದಂಪತಿಗಳ ಒಬ್ಬಳೇ ಪುತ್ರಿ ಆಗಿದ್ದಳು ಕೊಳ್ಳೇಗಾಲ ಮೂಲದವರಾದ ಈ ದಂಪತಿ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಪತಿ ರೇಣುಕೇಶ್ ವಾಚ್ ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದು ಅನಿತಾ ಗೃಹಿಣಿಯಾಗಿದ್ದಾರೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ 
ಮೈತ್ರಾ ಬಾಗಿಲಿನ ಬಳಿ ಆಡುತ್ತಿದ್ದಾಗ ಅವಳ ತಾಯಿ ಅನಿತಾ ಅಡಿಗೆ ತಯಾರಿಯಲ್ಲಿದ್ದರು. ಅದಾಗ ಸಮಯ ಸುಮಾರು  12.30 ಆಗಿದ್ದು  ಮಗು ಆಟವಾಡುತ್ತಾ ಬಾಲ್ಕನಿಗೆ ತೆರಳಿತು. ಅಲ್ಲಿ ಬಾಲ್ಕನಿ ಗ್ರಿಲ್ ಗಳ ನಡುವಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದೆ. ಅದಾಗ ನೆರೆ ಹೊರೆಯವರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗು ಮೈತ್ರಾ ಳನ್ನು ಕಂಡು ಅವರ ತಾಯಿಗೆ ಸುದ್ದಿ ತಿಳಿಸಿದ್ದಾರೆ. ಅದೇ ತಕ್ಷಣ ಮಗುವನ್ನು ನಿಮ್ಹಾನ್ಸ್ ಗೆ ದಾಖಲಿಸಲಾಗಿತ್ತಾದರೂ ಏನೂ ಪ್ರಯೋಜನವಾಗಲಿಲ್ಲ.
ಸ್ಥಳೀಯರು ಮಗುವಿನ ತಂದೆ ಹಾಗೂ ಪೋಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಚಂದ್ರಾ ಲೇಔಟ್ ಠಾಣೆ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆರ್. ಜತೆಗೆ ಕಟ್ಟಡ ಮಾಲೀಕರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ