ಬಾಗಲಕೋಟೆ: ಭಯೋತ್ಪಾದಕ ಆಗುವಂತೆ ಒತ್ತಡ, ಯುವಕನಿಂದ ಆತ್ಮಹತ್ಯೆಗೆ ಯತ್ನ 
ರಾಜ್ಯ

ಬಾಗಲಕೋಟೆ: ಭಯೋತ್ಪಾದಕ ಆಗುವಂತೆ ಒತ್ತಡ, ಯುವಕನಿಂದ ಆತ್ಮಹತ್ಯೆಗೆ ಯತ್ನ

ಉಗ್ರರು ತನಗೆ ಭಯೋತ್ಪಾದಕ ಆಗುವಂತೆ ಕಿರುಕುಳ ನೀಡುತ್ತಿದ್ದಾರೆ. ಕಾಲೇಜ್ ಗೆ ಬಾಂಬ್ ಇಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬಾಗಲಕೋಟೆ; ಉಗ್ರರು ತನಗೆ ಭಯೋತ್ಪಾದಕ ಆಗುವಂತೆ ಕಿರುಕುಳ ನೀಡುತ್ತಿದ್ದಾರೆ. ಕಾಲೇಜ್ ಗೆ ಬಾಂಬ್ ಇಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶರಣಪ್ಪ ನಾಗರಾಳ ತನಗೆ ಉಗ್ರರು ಭಯೋತ್ಪಾದಕ ಆಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಗಜೇಂದ್ರಗಡದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ನಾನು ಭಯೋತ್ಪಾದಕನಾಗುವುದಿಲ್ಲ. ಎಂದು ಹೇಳಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರ ತಿಳಿದ ಬಾಗಲಕೋಟೆ ಎಸ್.ಪಿ. ರಿಷ್ಯಂತ್ ಆಸ್ಪತ್ರೆಗೆ ಭೇಟಿ ನೀಡಿ ಯುವಕ ಶರಣಪ್ಪ ಮತ್ತು ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಮಹ್ಮದ್ ರಫಿ,ಇಸ್ಮಾಯಿಲ್ ಎನ್ನುವವನು ತನಗೆ ಭಯೋತ್ಪಾದನೆ ಸಂಘಟನೆಗೆ ಸೇರುವಂತೆ ಕಾಲೇಜ್‌ಗೆ ಬಾಂಬ್ ಇಡುವಂತೆ ಬೆದರಿಸುತ್ತಿದ್ದರು  ಎಂದ ಆರೋಪಿಸಿದ ಯುವಕ ಯಾವುದೇ ಮಾಹಿತಿಯನ್ನು ಸ್ಪಷ್ಟವಾಗಿ ಹೇಳುತ್ತಿಲ್ಲ. ಆದರೆ ಯುವಕನ ಕುಟುಂಬಸ್ಥರು ಈ ವಿಚಾರವನ್ನು ತಿರಸ್ಕರಿಸಿದ್ದು ತನ ಆರೋಗ್ಯ ಸರಿ ಇಲ್ಲ, ಮಾನಸಿಕ ಸ್ಥಿತಿ  ಉತ್ತಮವಾಗಿಲ್ಲ. ಮೇಲಾಗಿ ಆತನಿಗೆ ಯಾವುದೇ ಭಯೋತ್ಪಾದಕರ ಜತೆ ಸಂಪರ್ಕ ಇಲ್ಲ ಎಂದಿದ್ದಾರೆ.
ಯುವಕ ಶರಣಪ್ಪ ಕಲಿಯುತ್ತಿರುವ ಕಾಲೇಜಿನಲ್ಲಿ ವಿಚಾರಣೆ ನಡೆಸುತ್ತೇವೆ.  ತನಿಖೆ ನಂತರ ಪರಿಪೂರ್ಣ ಮಾಹಿತಿ ಸಿಗಲಿದೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT