ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಿಮ್ಮಕ್ಕರನ್ನು ಸನ್ಮಾನಿಸಲಾಯಿತು 
ರಾಜ್ಯ

'ತಿಮ್ಮಕ್ಕನ ಕಾಳಜಿಗೆ ದಕ್ಕಿದ್ದು ಕೇವಲ ಐನೂರು ರೂ. ಪಿಂಚಣಿ', ಸಾಲುಮರದ ತಿಮ್ಮಕ್ಕನ ಪುತ್ರ ಅಸಮಾಧಾನ

ರಾಜ್ಯ ಸರ್ಕಾರವು ತನ್ನ ಯೋಜನೆಗಳಿಗೆ ಸಾಲುಮರದ ತಿಮ್ಮಕ್ಕ ಹೆಸರನ್ನು ನೀಡಿದೆ, ಆದರೆ ತನ್ನ ಆರ್ಥಿಕ ಸ್ಥಿರತೆಯ ದೃಷ್ಟಿಯಿಂದ.....

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಯೋಜನೆಗಳಿಗೆ ಸಾಲುಮರದ ತಿಮ್ಮಕ್ಕ ಹೆಸರನ್ನು ನೀಡಿದೆ, ಆದರೆ ತನ್ನ ಆರ್ಥಿಕ ಸ್ಥಿರತೆಯ ದೃಷ್ಟಿಯಿಂದ ಅವರಿಗೆ ಹೆಚ್ಚಿನ ಸಹಾಯ ಮಾಡಿಲ್ಲ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಶನಿವಾರದಂದು ಆಯೋಜಿಸಲಾಗಿದ್ದ ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತಿಮ್ಮಕ್ಕನವರ ಪುತ್ರ ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮಾಜಕ್ಕೆ ನೀಡಿದ ಕೊಡುಗೆಯ ಹೊರತಾಗಿಯೂ ತಿಮ್ಮಕ್ಕ ಕೇವಲ 500 ರೂ. ಪಿಂಚಣಿ ಪಡೆಯುತ್ತಿದ್ದಾರೆ ಎಂದು ಉಮೇಶ್ ಹೇಳಿದರು "ತಿಮ್ಮಕ್ಕನಿಗೆ ಸ್ವಂತ ಮನೆ ಇಲ್ಲ, ಜೀವನಕ್ಕಾಗಿ ಸಾಕಷ್ಟು ಹಣವನ್ನು ಹೊಂದಿಲ್ಲ. ಅವರು ಕೇವಲ 500 ರೂ. ಪಿಂಚಣಿ ಪಡೆಯುತ್ತಾರೆ, "ಸರ್ಕಾರವು ಕ್ರಿಕೆಟಿಗರಿಗೆ ಮತ್ತು ಕಲಾವಿದರಿಗೆ ಕೋಟಿ ಕೋಟಿ ಹಣ ನಿಡುತ್ತದೆ. ಯಾವ ಪಕ್ಷ ಅಧಿಕಾರದಲ್ಲಿದೆ ಎಂಬ ಪ್ರಶ್ನೆಯಲ್ಲ. ಆದರೆ ತಿಮ್ಮಕ್ಕನಂತಹಾ ವ್ಯಕ್ತಿಯನ್ನು ಹೇಗೆ ಪರಿಗಣಿಸುತ್ತದೆ ಎನ್ನುವುದು ಪ್ರಶ್ನೆ" ಅವರು ಹೇಳಿದರು
ಸಮಾರಂಭದಲ್ಲಿದ್ದ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಉಮೇಶ ಅವರ ಮಾತುಗಳಿಗೆ ಪ್ರತಿಕ್ರಯಿಸಿದ್ದು ತಿಮ್ಮಕ್ಕ ಅವರಿಗೆ ಐದು ಎಕರೆ ಜಮೀನು ಮಂಜೂರು ಮಾಡಿ ಅಲ್ಲೆ ಸರ್ಕಾರಿ ನರ್ಸರಿ ಹಾಗೂ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಉಮೇಶ್ ಮಾಗಡಿ ಅಥವಾ ಬೆಂಗಳೂರಿನಲ್ಲಿ ಭೂಮಿ ಹೊಂದಲು ಇಚ್ಚಿಸಿದ್ದಾರೆ. ಬೆಂಗಳೂರಿನ ಸುತ್ತಲೂ ಭೂಮಿಯ ಬೆಲೆ ದುಬಾರಿಯಾಗಿದೆ. ಅದೇ ಅವರು ನನ್ನ ಕ್ಷೇತ್ರವಾದ ಚಿತ್ರದುರ್ಗದಲ್ಲಿ, ಭೂಮಿ ಬಯಸಿದರೆ ಐದು ಎಕರೆ ಅಲ್ಲ 10 ಎಕರೆಯನ್ನು ನೀಡಲು ಸಿದ್ದವಿದ್ದೇವೆ. ಆಂಜನೇಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT