ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಿಮ್ಮಕ್ಕರನ್ನು ಸನ್ಮಾನಿಸಲಾಯಿತು 
ರಾಜ್ಯ

'ತಿಮ್ಮಕ್ಕನ ಕಾಳಜಿಗೆ ದಕ್ಕಿದ್ದು ಕೇವಲ ಐನೂರು ರೂ. ಪಿಂಚಣಿ', ಸಾಲುಮರದ ತಿಮ್ಮಕ್ಕನ ಪುತ್ರ ಅಸಮಾಧಾನ

ರಾಜ್ಯ ಸರ್ಕಾರವು ತನ್ನ ಯೋಜನೆಗಳಿಗೆ ಸಾಲುಮರದ ತಿಮ್ಮಕ್ಕ ಹೆಸರನ್ನು ನೀಡಿದೆ, ಆದರೆ ತನ್ನ ಆರ್ಥಿಕ ಸ್ಥಿರತೆಯ ದೃಷ್ಟಿಯಿಂದ.....

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಯೋಜನೆಗಳಿಗೆ ಸಾಲುಮರದ ತಿಮ್ಮಕ್ಕ ಹೆಸರನ್ನು ನೀಡಿದೆ, ಆದರೆ ತನ್ನ ಆರ್ಥಿಕ ಸ್ಥಿರತೆಯ ದೃಷ್ಟಿಯಿಂದ ಅವರಿಗೆ ಹೆಚ್ಚಿನ ಸಹಾಯ ಮಾಡಿಲ್ಲ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಶನಿವಾರದಂದು ಆಯೋಜಿಸಲಾಗಿದ್ದ ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತಿಮ್ಮಕ್ಕನವರ ಪುತ್ರ ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮಾಜಕ್ಕೆ ನೀಡಿದ ಕೊಡುಗೆಯ ಹೊರತಾಗಿಯೂ ತಿಮ್ಮಕ್ಕ ಕೇವಲ 500 ರೂ. ಪಿಂಚಣಿ ಪಡೆಯುತ್ತಿದ್ದಾರೆ ಎಂದು ಉಮೇಶ್ ಹೇಳಿದರು "ತಿಮ್ಮಕ್ಕನಿಗೆ ಸ್ವಂತ ಮನೆ ಇಲ್ಲ, ಜೀವನಕ್ಕಾಗಿ ಸಾಕಷ್ಟು ಹಣವನ್ನು ಹೊಂದಿಲ್ಲ. ಅವರು ಕೇವಲ 500 ರೂ. ಪಿಂಚಣಿ ಪಡೆಯುತ್ತಾರೆ, "ಸರ್ಕಾರವು ಕ್ರಿಕೆಟಿಗರಿಗೆ ಮತ್ತು ಕಲಾವಿದರಿಗೆ ಕೋಟಿ ಕೋಟಿ ಹಣ ನಿಡುತ್ತದೆ. ಯಾವ ಪಕ್ಷ ಅಧಿಕಾರದಲ್ಲಿದೆ ಎಂಬ ಪ್ರಶ್ನೆಯಲ್ಲ. ಆದರೆ ತಿಮ್ಮಕ್ಕನಂತಹಾ ವ್ಯಕ್ತಿಯನ್ನು ಹೇಗೆ ಪರಿಗಣಿಸುತ್ತದೆ ಎನ್ನುವುದು ಪ್ರಶ್ನೆ" ಅವರು ಹೇಳಿದರು
ಸಮಾರಂಭದಲ್ಲಿದ್ದ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಉಮೇಶ ಅವರ ಮಾತುಗಳಿಗೆ ಪ್ರತಿಕ್ರಯಿಸಿದ್ದು ತಿಮ್ಮಕ್ಕ ಅವರಿಗೆ ಐದು ಎಕರೆ ಜಮೀನು ಮಂಜೂರು ಮಾಡಿ ಅಲ್ಲೆ ಸರ್ಕಾರಿ ನರ್ಸರಿ ಹಾಗೂ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಉಮೇಶ್ ಮಾಗಡಿ ಅಥವಾ ಬೆಂಗಳೂರಿನಲ್ಲಿ ಭೂಮಿ ಹೊಂದಲು ಇಚ್ಚಿಸಿದ್ದಾರೆ. ಬೆಂಗಳೂರಿನ ಸುತ್ತಲೂ ಭೂಮಿಯ ಬೆಲೆ ದುಬಾರಿಯಾಗಿದೆ. ಅದೇ ಅವರು ನನ್ನ ಕ್ಷೇತ್ರವಾದ ಚಿತ್ರದುರ್ಗದಲ್ಲಿ, ಭೂಮಿ ಬಯಸಿದರೆ ಐದು ಎಕರೆ ಅಲ್ಲ 10 ಎಕರೆಯನ್ನು ನೀಡಲು ಸಿದ್ದವಿದ್ದೇವೆ. ಆಂಜನೇಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT