ಸಾಂದರ್ಭಿಕ ಚಿತ್ರ 
ರಾಜ್ಯ

ಮಹಿಳೆಯರ ಸುರಕ್ಷತೆಗೆ ಪ್ರಯಾಣಿಕರ ಅಭಿಪ್ರಾಯ ಸಂಗ್ರಹಿಸುತ್ತಿರುವ ಬಿಎಂಟಿಸಿ

ಬಿಎಂಟಿಸಿ ಬಸ್ಸುಗಳಲ್ಲಿ ಮಹಿಳೆಯರ ಸುರಕ್ಷತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ....

ಬೆಂಗಳೂರು: ಬಿಎಂಟಿಸಿ ಬಸ್ಸುಗಳಲ್ಲಿ ಮಹಿಳೆಯರ ಸುರಕ್ಷತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಯಾಣಿಕರು ಸಲಹೆ ಸೂಚನೆಗಳನ್ನು ನೀಡಲು ಕೋರಲಾಗಿದೆ. ಕೇಂದ್ರ ಸರ್ಕಾರದ ನಿರ್ಭಯಾ ನಿಧಿಯಡಿ ಹಣಕಾಸಿನ ನೆರವು ಸಿಕ್ಕಿದ ನಂತರ ಬಿಎಂಟಿಸಿ ಇದೀಗ ಬೆಂಗಳೂರು ರಾಜಕೀಯ ಕಾರ್ಯ  ಸಮಿತಿ(ಬಿ.ಪಾಕ್)ಜೊತೆಗೆ ಸಮೀಕ್ಷೆ ನಡೆಸಿ, ನಾಗರಿಕರು ಯಾವುದೆಲ್ಲ ಅಗತ್ಯವಾಗಿದೆ ಎಂದು ಹೇಳುತ್ತಾರೆಯೋ ಅವುಗಳನ್ನು ಮಹಿಳೆಯರ ಸುರಕ್ಷತಾ ಕ್ರಮಗಳಿಗೆ ಹಣವನ್ನು ಬಳಸಿಕೊಳ್ಳಲಾಗುವುದು ಎಂದರು. 
ಕೇಂದ್ರದಿಂದ ಸಿಕ್ಕಿರುವ 57 ಕೋಟಿ ರೂಪಾಯಿಗಳನ್ನು ಹಲವು ಉಪಕ್ರಮಗಳನ್ನು ಅಭಿವೃದ್ಧಿಪಡಿಸಲು ಬಿಎಂಟಿಸಿ ಉತ್ಸುಕವಾಗುತ್ತಿದೆ. ಸಿಸಿಟಿವಿ ಕ್ಯಾಮರಾಗಳ ನಿಯೋಜನೆ, ಕಣ್ಗಾವಲು ವ್ಯವಸ್ಥೆಯನ್ನು ಬಿಎಂಟಿಸಿಯ ಹೊಸ ಬಸ್ಸುಗಳಿಗೆ ಅಳವಡಿಸುವುದು, ವಾರ್ಷಿಕ ಸಾಮರ್ಥ್ಯ ಪ್ರಮಾಣಪತ್ರ ತಪಾಸಣೆ ಸಂದರ್ಭದಲ್ಲಿ ಬಸ್ಸುಗಳನ್ನು ಮೇಲ್ದರ್ಜೆಗೇರಿಸುವುದು ಇತ್ಯಾದಿ ಕ್ರಮಗಳನ್ನು ಒಳಗೊಂಡಿರುತ್ತದೆ.
ಇದಕ್ಕೆ ಹೊರತಾಗಿ ಬೇರೆ ಯೋಜನೆಗಳು ಕೂಡ ಇರುತ್ತವೆ. ಬಿಎಂಟಿಸಿಯಲ್ಲಿ ಸುಮಾರು 35,000 ನೌಕರರಿದ್ದು ಅವರಲ್ಲಿ ಕನಿಷ್ಠ 10,000 ಕೂಡ ಮಹಿಳಾ ನೌಕರರಿಲ್ಲ. ಚಾಲಕರು, ನಿರ್ವಾಹಕ ಹುದ್ದೆಗಳನ್ನು ಹೆಚ್ಚು ಹೆಚ್ಚಾಗಿ ಮಹಿಳೆಯರಿಗೆ ನೀಡಲು ಅವರಿಗೆ ತರಬೇತಿ ನೀಡಲು ಕೂಡ ಬಿಎಂಟಿಸಿ ಕ್ರಮ ಕೈಗೊಳ್ಳುತ್ತಿದೆ.
ಸಿಸಿಟಿವಿ ಕ್ಯಾಮರಾ ಮತ್ತು ಚಾಲನಾ ತರಬೇತಿಯನ್ನು ಮಹಿಳಾ ನೌಕರರಿಗೆ ನೀಡುವುದು ಮಾತ್ರವಲ್ಲದೆ ಮಹಿಳೆಯರಿಗೆ ನಿರ್ದಿಷ್ಟವಾದ ಆಪ್ ಗಳು, ಬಿಎಂಟಿಸಿ ಸಿಬ್ಬಂದಿಗೆ ಲಿಂಗ ಸೂಕ್ಷ್ಮತೆ ಕಾರ್ಯಕ್ರಮಗಳು, ಮಹಿಳಾ ಪ್ರಯಾಣಿಕರಿಗೆ ಲಾಂಜ್ ಗಳನ್ನು ಕೂಡ ಒಳಗೊಂಡಿರುತ್ತದೆ. ಸಮೀಕ್ಷೆ ನಡೆಸುವುದರಿಂದ ಪ್ರಯಾಣಿಕರಿಗೆ ಯಾವೆಲ್ಲಾ ಸೇವೆಗಳು ಅಗತ್ಯವಾಗಿರುತ್ತದೆ ಎಂದು ತಿಳಿದುಕೊಳ್ಳಬಹುದಾಗಿದೆ. ಆನ್ ಲೈನ್ ಮೂಲಕ ಮತ್ತು ಹಲವು ಬಸ್ ನಿಲ್ದಾಣಗಳಲ್ಲಿ ಸಮೀಕ್ಷೆ ನಡೆಸಲಾಗುವುದು. 2,000 ಮಂದಿಯಿಂದ ಪ್ರತಿಕ್ರಿಯೆ ಪಡೆದ ನಂತರ ಫಲಿತಾಂಶವನ್ನು ಬಿಎಂಟಿಸಿಗೆ ಸಲ್ಲಿಸಲಾಗುವುದು ಎನ್ನುತ್ತಾರೆ ಬಿ.ಪಾಕ್ ವಕ್ತಾರರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT