ಪೊಲೀಸ್ ದಾಳಿ ನಡೆದ ಸ್ಪಾ ಸೆಂಟರ್ 
ರಾಜ್ಯ

ಬಾಡಿ ಮಸಾಜ್ ಹೆಸರಲ್ಲಿ ವೇಶ್ಯಾವಾಟಿಕೆ, ಮೈಸೂರಿನಲ್ಲಿ ಇಬ್ಬರ ಬಂಧನ

ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಮೈಸೂರಿನಲ್ಲಿ ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸ್ಪಾ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಓರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮೈಸೂರು: ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಮೈಸೂರಿನಲ್ಲಿ ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸ್ಪಾ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಅಂತೆಯೇ ಓರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿರುವ ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಪಾ ನಲ್ಲಿದ್ದ ಓರ್ವ ಯುವತಿಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.  ಪ್ರಸ್ತುತ ಸ್ಪಾ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರನ್ನು ಸ್ಪಾ ಮಾಲೀಕ ವೇಶ್ಯಾವಾಟಿಕೆಗೆ ಒತ್ತಾಯ ಪಡಿಸುತ್ತಿದ್ದ ಎಂದು ಹೇಳಲಾಗಿದೆ.
ಈ ಬಗ್ಗೆ ನೊಂದ ಯುವತಿ ಮೈಸೂರಿನ ಒಡನಾಡಿ ಸಂಸ್ಥೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದು, ಒಡನಾಡಿ ಸಂಸ್ಥೆಗೆ ಪತ್ರದ ಮೂಲಕ ತನ್ನ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದ್ದಳಂತೆ. ಪತ್ರದ ಮಾಹಿತಿ  ಪಡೆದ ಒಡನಾಡಿ ಸಂಸ್ಥೆ ಸರಸ್ವತಿಪುರಂ ಠಾಣೆಯ ಪೊಲೀಸರು ಹಾಗೂ ಮಹಿಳಾ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆಸಿ ಯುವತಿಯನ್ನ ರಕ್ಷಿಸಲಾಗಿದೆ. ಮಸಾಜ್ ಮಾಡಿಸಿಕೊಳ್ಳಲು ಬಂದ ಪುರಷರೊಂದಿಗೆ ಲೈಂಗಿಕವಾಗಿ  ಸಹಕರಿಸುವಂತೆ ಒತ್ತಾಯಿಸುತ್ತಿದ್ದರು ಎಂದು ನೊಂದ ಯುವತಿ ಆರೋಪಿಸಿದ್ದಳು.
ಯುವತಿ ದೂರಿನಲ್ಲಿ ಇಬ್ಬರು ಸ್ಯಾಂಡಲ್ ವುಡ್ ಸ್ಟಾರ್ ನಟರ ಹೆಸರು?
ಇನ್ನು ಪೊಲೀಸರಿಗೆ ದೂರು ನೀಡಿರುವ ಯುವತಿ ದೂರಿನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು, "ನನ್ನನ್ನು ಮಹಿಳೆಯರಿಗೆ ಮಸಾಜ್ ಮಾಡಲು ಎಂದು ಇಲ್ಲಿಗೆ ಕರೆ ತರಲಾಗಿತ್ತು. ನಂತರದ ಕೆಲವು  ದಿನಗಳಲ್ಲಿ ಪುರುಷರಿಗೆ ಮಸಾಜ್ ಮಾಡುವಂತೆ ನನ್ನ ಒತ್ತಡ ಹಾಕಲಾಯಿತು. ಒಬ್ಬಬ್ಬ ಪುರುಷರು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ಈ ಬಗ್ಗೆ ಸ್ಪಾ ಮಾಲೀಕ ರಾಜೇಶ್ ಗೆ ತಿಳಿಸಿದರೆ ಆತ ಅದಕ್ಕೆ ಸಹಕರಿಸಬೇಕೆಂದು  ಹೇಳಿದ್ದಾನೆ. ಈ ವೇಳೆ ಸ್ಪಾಗೆ ಸ್ಯಾಂಡಲ್‍ವುಡ್ ಇಬ್ಬರೂ ಹಾಸ್ಯ ನಟರಿಬ್ಬರು ಬಂದಿದ್ದು, ಅವರಿಗೂ ನಾನು ಮಸಾಜ್ ಮಾಡಿದ್ದೇನೆ. ಆದರೆ ನನಗೆ ಅನ್ಯ ಪುರುಷರೊಂದಿಗೆ ಲೈಂಗಿಕವಾಗಿ ಸಹಕರಿಸಲು ಇಷ್ಟವಿಲ್ಲ ಎಂದು ಯುವತಿ  ಪೊಲೀಸರಿಗೆ ಲಿಖಿತ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಯುವತಿ ದೂರಿನಲ್ಲಿ ಉಲ್ಲೇಖಿಸಿರುವ ಇಬ್ಬರು ನಟರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಪೊಲೀಸ್ ಮೂಲಗಳು ತಿಳಿಸಿರುವಂತೆ ಸಂತ್ರಸ್ಥ ಯುವತಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಳ್ಳಿಯೊಂದರ  ನಿವಾಸಿ ಎಂದು ತಿಳಿದು ಬಂದಿದ್ದು, ಸಿನಿಮಾಗಳಲ್ಲಿ ಅವಕಾಶ ಕೊಡಿಸುತ್ತೇವೆ ಎಂದು ನಂಬಿಸಿ ಸ್ಪಾ ಮಾಲೀಕ ರಾಜೇಶ್ ಆಕೆಯನ್ನು ಮೈಸೂರಿಗೆ ಕರೆತಂದಿದ್ದನಂತೆ. ಅಲ್ಲದೆ ಸಿನಿಮಾದಲ್ಲಿ ಅವಕಾಶ ಸಿಗುವರೆಗೂ ಸ್ಪಾ ನಲ್ಲಿ  ಫ್ರೀಯಾಗಿ ಕೆಲಸ ಮಾಡಬೇಕೆಂದು ಷರತ್ತು ವಿಧಿಸಲಾಗಿತ್ತು. ರಾಜೇಶ್ ಈ ಹಿಂದೆ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಪರಶು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2-3 ದಿನಗಳಲ್ಲಿ ಸೋಲಿಸುತ್ತೇವೆಂದಿದ್ದರು, 40 ದಿನಗಳ ಸಂಘರ್ಷ ನಂತರವೂ ಅಚಲವಾಗಿ ನಿಂತಿದ್ದೇವೆ: ಯುದ್ಧದಲ್ಲಿ ಗೆದ್ದಿದ್ದು ನಾವೇ; ಅಮೆರಿಕಾ ಕುರಿತು ಇರಾನ್ ಲೇವಡಿ

ಹಾರ್ಮುಜ್'ನಲ್ಲಿ ಮುಂದುವರೆದ ಉದ್ವಿಗ್ನತೆ: ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ: ಟ್ರಂಪ್'ಗೆ ತಿವಿದ ಇರಾನ್

ಹಾರ್ಮುಜ್'ನಲ್ಲಿ ಹಡಗುಗಳ ಮೇಲೆ ಗುಂಡಿನ ದಾಳಿ: ಭಾರತ–ಇರಾನ್ ಸಂಬಂಧ 5,000 ವರ್ಷಗಳಷ್ಟು ಹಳೆಯದು, ಅಲ್ಪಕಾಲಿಕ ಘಟನೆಗಳು ಪರಿಣಾಮ ಬೀರಲ್ಲ; ಟೆಹ್ರಾನ್

ಪಾಕಿಸ್ತಾನದ ಅಸಿಮ್ ಮುನೀರ್- ಟ್ರಂಪ್ ಸ್ನೇಹ ಹೆಚ್ಚುತ್ತಿದ್ದಂತೆಯೇ ' ಡೆಂಜರಸ್' ಎಂದ ಅಮೆರಿಕದ ನಾಯಕರು!

IPL 2026: ರೋಚಕ ಪಂದ್ಯದಲ್ಲಿ CSK ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್! ಕಾವ್ಯ ಮಾರನ್ ಸೆಲೆಬ್ರೆಷನ್ ಹೇಗಿತ್ತು ಗೊತ್ತಾ? Video

SCROLL FOR NEXT