ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬಿಬಿಎಂಪಿ ಕೌನ್ಸಿಲರ್ ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಜೀವ ಬೆದರಿಕೆ, ದೂರು ದಾಖಲು

ಬಿಬಿಎಂಪಿ ಕೌನ್ಸಿಲರ್ ಓರ್ವರಿಗೆ 'ಅಜ್ಞಾತ ವ್ಯಕ್ತಿಯಿಂದ' ಜೀವ ಬೆದರಿಕೆ ಕರೆ ಬಂದಿದೆ. ಭೂಗತ ಪಾತಕಿ ರವಿ ಪೂಜಾರಿ ಕಡೆಯಿಂದ ಬಂದ ಕರೆ ಇದಾಗಿತ್ತೆಂದು......

ಬೆಂಗಳೂರು: ಬಿಬಿಎಂಪಿ ಕೌನ್ಸಿಲರ್ ಓರ್ವರಿಗೆ 'ಅಜ್ಞಾತ ವ್ಯಕ್ತಿ'ಯಿಂದ' ಜೀವ ಬೆದರಿಕೆ ಕರೆ ಬಂದಿದೆ. ಭೂಗತ ಪಾತಕಿ ರವಿ ಪೂಜಾರಿ ಕಡೆಯಿಂದ ಬಂದ ಕರೆ ಇದಾಗಿತ್ತೆಂದು ಪಾದರಾಯನಪುರ ವಾರ್ಡ್ ನ ಕೌನ್ಸಿಲರ್ ಇಮ್ರಾನ್ ಪಾಶಾ ಹೇಳಿದ್ದಾರೆ. ಅವರು ಈ ಸಂಬಂಧ ಜಗಜೀವನ್ ರಾಮ್ ನಗರ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅವರು ಡಿಸೆಂಬರ್ 10 ಮತ್ತು ಡಿಸೆಂಬರ್ 11 ರ ಮಧ್ಯರಾತ್ರಿಯ ಸಮಯದಲ್ಲಿ ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಯಿಂದ ಕರೆ ಸ್ವೀಕರಿಸಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ರವಿ ಪೂಜಾರಿ ಆಗಿದ್ದನೆಂದು ಅವರು ಎಕ್ಸ್ ಪ್ರೆಸ್ ಗೆ ತಿಳಿಸಿದರು. ತನ್ನ ರಾಜಕೀಯ ವಿರೋಧಿಗಳು ನನ್ನನ್ನು ಮುಗಿಸಲು ಅವನಿಗೆ ಸುಪಾರಿ ನೀಡಿದ್ದಾರೆ ಎಂದು ಪಾಶಾ ಆರೋಪಿಸಿದರು.
ಕರೆ ಮಾಡಿದ್ದ ವ್ಯಕ್ತಿ ಪಾಶ ಅವರಿಗೆ ವಾರ್ಡ್ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸ್ಥಾನದಿಂದ ದೂರ ಸರಿಯಲು ಹೇಳಿದ್ದಲ್ಲದೆ ಎರಡು ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದನು. ಆಗ ಪಾಶಾ ಅಂತಹಾ ಕರೆಗಳನ್ನು ಸ್ವೀಕರಿಸುವುದನ್ನು ಬಿಟ್ಟರು. ಆಗ ಆ ವ್ಯಕ್ತಿ ಇವರಿಗೆ 'ನಾವು ನಿಮ್ಮನ್ನು ಹತ್ಯೆ ಮಾಡುವುದಾಗಿ' ಸಂದೇಶವನ್ನು ಕಳಿಸಿದ್ದನು.
ಅಂತರ್ಜಾಲ ಬಳಸಿ ಕರೆ ಮಾಡಿರುವ ಕಾರಣ ಕರೆಯ ಮೂಲವನ್ನು ಪತ್ತೆ ಮಾಡುವುದು ಕಠಿಣವಾಗಿದೆ.ದೂರವಾಣಿ ಸಂಖ್ಯೆಗಳನ್ನು ನಾವು ಇದಾಗಲೇ ಸೈಬರ್ ಕ್ರೈಂ ವಿಭಾಗದವರಿಗೆ ನೀಡಿದ್ದೇವೆ. ಅವರು ಹೆಚ್ಚಿನ ತನಿಖೆ ಕೈಗೊಳ್ಳುತ್ತಾರೆ ಎಂಡು ಹಿರಿಯ ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT