ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಬ್ಯಾಂಕ್ ಗೋಡೆ ಕೊರೆದು, ಎಟಿಎಂ ಒಡೆದು, 30 ಲಕ್ಷ ರು. ದರೋಡೆ

ದುಷ್ಕರ್ಮಿಗಳು ತುಮಕೂರಿನ ಹಿರೇಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ ಬಿಐ ಬ್ಯಾಂಕ್ ಗೋಡೆ ಕೊರೆದು, ಬ್ಯಾಂಕ್ ಒಳಗಡೆ....

ತುಮಕೂರು: ದುಷ್ಕರ್ಮಿಗಳು ತುಮಕೂರಿನ ಹಿರೇಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ ಬಿಐ ಬ್ಯಾಂಕ್ ಗೋಡೆ ಕೊರೆದು, ಬ್ಯಾಂಕ್ ಒಳಗಡೆ ಇದ್ದ ಎಟಿಎಂ ಒಡೆದು 30 ಲಕ್ಷ ರುಪಾಯಿ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ದರೋಡೆಕೋರರು ಬ್ಯಾಂಕ್ ನಲ್ಲಿದ್ದ ಸಿ.ಸಿ.ಟಿವಿ ಕ್ಯಾಮೆರಾ ಮತ್ತು ದೃಶ್ಯ ಸಂಗ್ರಹವಾಗುವ ಉಪಕರಣವನ್ನು ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎಟಿಎಂಗೆ ಭದ್ರತಾ ಸಿಬ್ಬಂದಿ ಇರಲಿಲ್ಲ. ಬೆಳಗ್ಗೆ ಎಟಿಎಂಗೆ ಗ್ರಾಹಕರು ಹಣ ತೆಗೆದುಕೊಳ್ಳಲು ಬಂದಾಗ ವಿಷಯ ಗೊತ್ತಾಗಿದೆ. ಬಳಿಕ ಬ್ಯಾಂಕ್ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ. ಬಳಿಕ ಬ್ಯಾಂಕ್ ಸಿಬ್ಬಂದಿ ಕ್ಯಾತ್ಸಂದ್ರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಎಸ್ ಬಿಐ ಬ್ಯಾಂಕ್ ನ ಸಹಾಯಕ ವ್ಯವಸ್ಥಾಪಕ ಮಹದೇಶ್ವರ್ ಅವರು ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ದರೋಡೊಕೋರರಿಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT