ಕೆಜೆ ಜಾರ್ಜ್ 
ರಾಜ್ಯ

ಬೆಂಗಳೂರು: ಹೊಸ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಜಾರ್ಜ್ ಚಾಲನೆ

ನಿತ್ಯ 15 ದಶ ಲಕ್ಷ ಲೀಟರ್ ಕೊಳಚೆ ನೀರು ಸಂಸ್ಕರಣೆ ಮಾಡುವ ಸಾಮರ್ಥ್ಯ ಹೊಂದಿರುವ ಹೊಸ ಕೊಳಚೆ ನೀರಿನ ಸಂಸ್ಕರಣಾ....

ಬೆಂಗಳೂರು: ನಿತ್ಯ 15 ದಶ ಲಕ್ಷ ಲೀಟರ್ ಕೊಳಚೆ ನೀರು ಸಂಸ್ಕರಣೆ ಮಾಡುವ ಸಾಮರ್ಥ್ಯ ಹೊಂದಿರುವ ಹೊಸ ಕೊಳಚೆ ನೀರಿನ ಸಂಸ್ಕರಣಾ ಘಟಕಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಶನಿವಾರ ಚಾಲನೆ ನೀಡಿದ್ದಾರೆ.

ಸೀಗೆಹಳ್ಳಿಯ ಯಲ್ಲಮಲ್ಲಪ್ಪ ಚೆಟ್ಟಿ ಕೆರೆ ಬಳಿ ಹೊಸ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗಿದ್ದು, ಇಂದು ಅದಕ್ಕೆ ಚಾಲನೆ ನೀಡಿ ಮಾತನಾಡಿದ ಜಾರ್ಜ್, ನಗರದಲ್ಲಿ ನಿತ್ಯ 1400 ದಶ ಲಕ್ಷ ಲೀಟರ್ ಕೊಳಚೆ ನೀರು ಉತ್ಪಾದನೆಯಾಗುತ್ತಿದೆ. ಆ ಪೈಕಿ 997 ದಶ ಲಕ್ಷ ಲೀಟರ್ ಸಂಸ್ಕರಣೆಯಾಗುತ್ತಿದ್ದು, 2020ರ ವೇಳೆ ನಗರದಲ್ಲಿ ಉತ್ಪಾದನೆಯಾಗುವ ಎಲ್ಲಾ ಕೊಳಚೆ ನೀರನ್ನು ಸಂಸ್ಕರಿಸುವ ಗುರಿ ಹೊಂದಲಾಗಿದೆ ಎಂದರು.

ಕೆಆರ್ ಪುರಂ, ಭಟ್ಟರಹಳ್ಳಿ, ಹೂಡಿ, ಮೇಧಹಳ್ಳಿ ಮತ್ತು ಮಹಾದೇವಪುರದ ಕೊಳಚೆ ನೀರನ್ನು ಈ ಘಟಕದಲ್ಲಿ ಸಂಸ್ಕರಿಸಲಾಗುವುದು. ಈ ಘಟಕವನ್ನು 67 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಜಾರ್ಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT