ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಲಿಂಗಾಯತ ಧರ್ಮ ಅಧ್ಯಯನಕ್ಕೆ ಸಮಿತಿ ರಚಿಸಿದ ಸರ್ಕಾರ: 4 ವಾರದಲ್ಲಿ ವರದಿ ಸಲ್ಲಿಸಲು ಸೂಚನೆ

ವಿಧಾನಸಬಾ ಚುನಾವಣೆ ವೇಳೆ ಭಾರೀ ರಾಜಕೀಯ ದಾಳವಾಗಿ ಬಳಕೆಯಾಗಲಿದೆ ಎಂದೇ ನಿರೀಕ್ಷಿಸಲಾಗಿರುವ ಲಿಂಗಾಯತ ಹಾಗೂ ವೀರಶೈವ ಧರ್ಮದ ಧರ್ಮದ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು...

ಬೆಂಗಳೂರು: ವಿಧಾನಸಬಾ ಚುನಾವಣೆ ವೇಳೆ ಭಾರೀ ರಾಜಕೀಯ ದಾಳವಾಗಿ ಬಳಕೆಯಾಗಲಿದೆ ಎಂದೇ ನಿರೀಕ್ಷಿಸಲಾಗಿರುವ ಲಿಂಗಾಯತ ಹಾಗೂ ವೀರಶೈವ ಧರ್ಮದ ಧರ್ಮದ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ರಾಜ್ಯ ಸರ್ಕಾರ ಶುಕ್ರವಾರ ಉನ್ನತಮಟ್ಟದ ಸಮಿತಿಯೊಂದನ್ನು ರಚನೆ ಮಾಡಿದ್ದು, 4 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚನೆ ನೀಡಿದೆ. 
ಲಿಂಗಾಯತ ಹಾಗೂ ವೀರಶೈವ ಧರ್ಮದ ವಿಚಾರವಾಗಿ ಸಲ್ಲಿಕೆಯಾಗಿದ್ದ 5 ಮನವಿ ಪತ್ರಗಳ ಕುರಿತಂತೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಳೆದ ಸೋಮವಾರವಷ್ಟೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಶಿಫಾರಸು ಮಾಡಿತ್ತು. ಸರ್ಕಾರದ ಮನವಿ ಮೇರೆಗೆ ಆಯೋಗವು ನಿನ್ನೆ 7 ಮಂದಿ ತಜ್ಞರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ. 
ಸಮಿತಿಯು ಅಧ್ಯಯನ ನಡೆಸಿ, ವೀರಶೈವ ಅಥವಾ ಲಿಂಗಾಯತ, ವೀರಶೈವ-ಲಿಂಗಾಯತ ಹಾಗೂ ಲಿಂಗಾಯತ ಈ ಮೂರು ಶಬ್ದಗಳ ಬಗೆಗೆ ಇರುವ ಸಂಶಯಗಳಿಗೆ ಉತ್ತರವಾಗಿ ಆಯೋಗಕ್ಕೆ ಶಿಫಾರಸು ಮಾಡಲಿದೆ. ಈ ಶಿಫಾರಸನ್ನು ಆಯೋಗ ರಾಜ್ಯ ಸರ್ಕಾರಕ್ಕೆ ಕಳಿಸಲಿದ್ದು, ಮುಂದೆ ಸರ್ಕಾರ ವಿವಾದದ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. 
ಸರ್ಕಾರ ರಚನೆ ಮಾಡಿರುವ ಸಮಿತಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅಧ್ಯಕ್ಷರಾಗಿದ್ದು, ಚಿಂತಕ ಪ್ರೊ.ಮುಜಾಫರ್ ಅಸಾದಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್. ದ್ವಾರಕಾನಾಥ್, ಹಿರಿಯ ಪತ್ರಕರ್ತ ಸರಜೂಕಾಟ್ಕರ್, ವಿಮರ್ಶಕ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಹಿರಿಯ ಸಾಹಿತಿ ರಾಮಕೃಷ್ಣ ಮರಾಠೆ ಸಮಿತಿಯ ಸದಸ್ಯರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!