ಕದ್ರಿ ಮಂಜುನಾಥೇಶ್ವರ ದೇವಾಲಯ 
ರಾಜ್ಯ

ಕದ್ರಿ ಮಂಜುನಾಥ ದೇವಾಲಯದಲ್ಲಿ ಧ್ವನಿವರ್ಧಕ ಬಳಕೆ ಮಾಡದಂತೆ ಮನವಿ: ಹಿಂದೂ ಸಂಘಟನೆಗಳ ಆಕ್ರೋಶ

ದೇವಾಲಯದಲ್ಲಿ ಧ್ವನಿ ವರ್ಧಕ ಬಳಕೆ ಮಾಡುವುದನ್ನು ಆಕ್ಷೇಪಿಸಿ ಮಂಗಳೂರು ಮೇಯರ್ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿರುವುದು ವಿವಾದಕ್ಕೀಡಾಗಿದೆ.

ಮಂಗಳೂರು: ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ ಧ್ವನಿ ವರ್ಧಕಗಳನ್ನು ಸೀಮಿತವಾಗಿ ಬಳಕೆ ಮಾಡುವಂತೆ ಮಂಗಳೂರು ಮೇಯರ್ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿರುವುದು ವಿವಾದಕ್ಕೀಡಾಗಿದೆ. 
ಕದ್ರಿ ದೇವಸ್ಥಾನದಲ್ಲಿ ವಿಶೇಷ ದಿನಗಳಲ್ಲಿ ಶ್ಲೋಕ ಮತ್ತು ಭಕ್ತಿಗೀತೆಗಳನ್ನು ಹಾಕುತ್ತಿರುವುದರಿಂದ ತೊಂದರೆಯುಂಟಾಗುತ್ತಿದೆ ಎಂದು ಸ್ಥಳೀಯ ನಿವಾಸಿ ಬ್ಲೇನಿ ಡಿಸೋಜಾ ಎಂಬುವವರು ಮಂಗಳೂರು ಮೇಯರ್ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿದ್ದಾರೆ. 
ದೇವಸ್ಥಾನದ ಧ್ವನಿವರ್ಧಕದಿಂದ ಸ್ಥಳೀಯ ಫ್ಲ್ಯಾಟ್ ಗಳಲ್ಲಿ ನೆಲೆಸುವವರಿಗೆ ತೊಂದರೆಯಾಗುತ್ತಿದ್ದು, ದೇವಸ್ಥಾನದ ಒಳಭಾಗಕ್ಕೆ ಕೇಳಿಸುವಂತೆ ಮಾತ್ರ ಹಾಕಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯಿಂದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಈ ಮನವಿಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಒಂಡು ವೇಳೆ ಧ್ವನಿವರ್ಧಕದಲ್ಲಿ ಹಾಕುವ ಭಕ್ತಿ ಗೀತೆಗಳನ್ನು ನಿಲ್ಲಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

Israeli strikes: ಗಾಜಾದಲ್ಲಿ ನಿಲ್ಲದ ಇಸ್ರೇಲ್ ವೈಮಾನಿಕ ದಾಳಿ; 52 ಜನರ ಹತ್ಯೆ!

SCROLL FOR NEXT