ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸಾವು 
ರಾಜ್ಯ

ಬೆಂಗಳೂರು: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸಾವು

ಇಬ್ಬರು ಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಕೊತ್ತನೂರು ದಿಣ್ಣೆಯಲ್ಲಿ ನಡೆದಿದೆ.

ಬೆಂಗಳೂರು: ಇಬ್ಬರು ಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಕೊತ್ತನೂರು ದಿಣ್ಣೆಯಲ್ಲಿ ನಡೆದಿದೆ.  ಚುಂಚಲಘಟ್ಟದವರಾದ ಪುನೀತ್ ಹಾಗೂ ಹರೀಶ್ ಮೃತ ದುರ್ದೈವಿಗಳಾಗಿದ್ದು ಇಬ್ಬರೂ ಕೆರೆಯಲ್ಲಿ ಈಜಲು ಇಳಿದಿದ್ದರು ಎಂದು ಪೋಲೀಸರು ಮಾಹಿತಿ ನೀಡೀದ್ದಾರೆ.
ಇಬ್ಬರು ಬಾಲಕರೂ ಯೆಲಚೇನಹಳ್ಳಿಯ ಶಾಲೆಯೊಂದರಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಅವರ ಪೋಷಕರು ಗಾರ್ಮೆಂಟ್ ಸಂಸ್ಥೆಯಲ್ಲಿ ಕೆಲಸದಲ್ಲಿದ್ದರು. 
ಹಿಂದಿನ ದಿನ ಸಂಜೆ ಇಬ್ಬರೂ ಜೆಪಿ ನಗರದಲ್ಲಿನ ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ತೆರಳುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೊರಟಿದ್ದು ತಡರಾತ್ರಿಯವರೆಗೂ ಹಿಂತಿರುಗಿರಲಿಲ್ಲ. ಮನೆಯವರು ಗಾಬರಿಗೊಂಡು ಹುಡುಕಲಾರಂಭಿಸಿದಾಗ ಕೆರೆಯ ಬಳಿ ಪುನೀತ್ ಬಟ್ಟೆಗಳು ಪತ್ತೆಯಾಗಿದೆ. ತಕ್ಷಣ ಅಗ್ನಿಶಾಮಕ ಹಾಗೂ ತುರ್ತು ಘಟಕಕ್ಕೆ ಕರೆ ಮಾಡಿದ ಸಂಬಂಧಿಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಅದಾಗಿ ಅರ್ಧ ತಾಸು ಹುಡುಕಾಟದ ಬಳಿಕ ಕೆರೆಯಲ್ಲಿದ್ದ ಬಾಲಕರ ದೇಹಗಳು ಪತ್ತೆಯಾಗಿದೆ.  
ಕೋಣನಕುಂಟೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT