ಮೆಹಂದಿ ದಿನ ಪ್ರಿಯಕರನೊಡನೆ ನಾಪತ್ತೆಯಾಗಿದ್ದ ಯುವತಿ ಪೋಲೀಸರ ವಶಕ್ಕೆ 
ರಾಜ್ಯ

ಮೂಡಬಿದಿರೆ: ಮೆಹಂದಿ ದಿನ ಪ್ರಿಯಕರನೊಡನೆ ನಾಪತ್ತೆಯಾಗಿದ್ದ ಯುವತಿ ಪೋಲೀಸರ ವಶಕ್ಕೆ

ಮದುವೆಗೆ ಎರಡು ದಿನ ಮೊದಲು ತಾನು ಪ್ರೀತಿಸುತ್ತಿದ್ದ ಯುವಕನೊಡನೆ ಪರಾರಿಯಾಗಿದ್ದ ಮೂಡಬಿದಿರೆಯ ಯುವತಿಯನ್ನು ಪೋಲೀಸರು ಬಂಧಿಸಿದ್ದಾರೆ.

ಮೂಡಬಿದಿರೆ: ಮದುವೆಗೆ ಎರಡು ದಿನ ಮೊದಲು ತಾನು ಪ್ರೀತಿಸುತ್ತಿದ್ದ ಯುವಕನೊಡನೆ ಪರಾರಿಯಾಗಿದ್ದ ಮೂಡಬಿದಿರೆಯ ಯುವತಿಯನ್ನು ಪೋಲೀಸರು ಬಂಧಿಸಿದ್ದಾರೆ. 
ಮಂಗಳೂರಿನ ಪಣಂಬೂರು ಹಾಗೂ ಮೂಡಬಿದಿರೆ ಪೋಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಯುವಜೋಡಿಯನ್ನು ಮುಂಬೈನಲ್ಲಿ ಪತ್ತೆಹಚ್ಚಿದ್ದಾರೆ.
ಪ್ರೇಮಿಗಳನ್ನು ವಶಕ್ಕೆ ಪಡೆದ ಪೋಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಯುವತಿಗೆ ಡಿ.26 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ವೇಳೆ ಆಕೆಯ ಪ್ರಿಯಕರನ ವಿರುದ್ಧ ಯಾವ ಪ್ರಕರಣವೂ ದಾಖಲಾಗಿಲ್ಲದ ಕಾರಣ ಅವನನ್ನು ವಶಕ್ಕೆ ಪಡೆದಿರುವ ಪೋಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ವಿವರ: ಮೂಡಬಿದಿರೆ ಪ್ರಿಯಾಂಕಾ ಎನ್ನುವ ಯುವತಿಗೆ ಕುಂದಾಪುರ ಮೂಲದ ಯುವಕನೊಡನೆ ಮದುವೆ ನಿಶ್ಚಯವಾಗಿದ್ದು ಡಿ.11ಕ್ಕೆ ಮದುವೆ ಏರ್ಪಾಟಾಗಿತ್ತು. ಆದರೆ ಮದುವೆಗೆ ಎರಡು ದಿನಗಳಿರುವಾಗ ನಡೆದಿದ್ದ ಮೆಹದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಧು ಡಿ.9ರ ರಾತ್ರಿ ನಾಪತ್ತೆಯಾಗಿದ್ದಳು. ಪ್ರಿಯಾಂಕಾಗೆ ಪಣಂಬೂರಿನ ಹೈದರ್ ಎನ್ನುವ ಯುವಕನೊಡನೆ ಸಂಬಂಧವಿತ್ತು. ಆತನ ಪ್ರೇಮಪಾಶಕ್ಕೆ ಸಿಲುಕಿದ ಯುವತಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಲ್ಲದೆ ಪ್ರತಿಭಟನೆ ನಡೆಸಿದ್ದವು
ಪ್ರಿಯಾಂಕ ಮನೆಯವರಿಗೆ ಅಮಲು ಪದಾರ್ಥ ನೀಡಿ ಚಿನ್ನಾಭರಣ ಹಾಗೂ ಆಧಾರ್ ಕಾರ್ಡ್ ನಂತಹಾ ದಾಖಲೆಗಳೊಡನೆ ಪರಾರಿಯಾಗಿದ್ದಾಳೆ ಎಂದು ಆಕೆಯ ತಾಯಿ ಮೂಡುಬಿದಿರೆ ಪೋಲೀಸರಿಗೆ ದೂರು ಸಲ್ಲಿಸಿದ್ದರು. ಕರಾವಳಿ ಭಾಗ ಸೇರಿ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣವನ್ನು ಪೋಲೀಸರು ಗಂಭೀರವಾಗಿ ಪರಿಗಣಿಸಿದ್ದರು. ಇದೀಗ ಯುವತಿ ಜೈಲು ಸೇರಿದ್ದು ಹಸೆಮಣೆ ಏರಬೇಕಾದವಳು ಜೈಲು ಪಾಲಾಗಿರುವುದು ಮಾತ್ರ ವಿಪರ್ಯಾಸ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!