ನೀಲಮಣಿ ಪೂಕಾನ್‌ ಮತ್ತು ಹೊಮೆನ್‌ ಬೋರ್ಗೊಹೈನ್‌ 
ರಾಜ್ಯ

ಇಬ್ಬರು ಅಸ್ಸಾಮಿ ಸಾಹಿತಿಗಳು ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ

ಅಸ್ಸಾಂನ ಪ್ರಸಿದ್ದ ಸಾಹಿತಿಗಳಾದ ಹೊಮೆನ್‌ ಬೋರ್ಗೊಹೈನ್‌ ಮತ್ತು ನೀಲಮಣಿ ಪೂಕಾನ್‌ ಅವರುಗಳು ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ತೀರ್ಥಹಳ್ಳಿ: ಅಸ್ಸಾಂನ ಪ್ರಸಿದ್ದ ಸಾಹಿತಿಗಳಾದ ಹೊಮೆನ್‌ ಬೋರ್ಗೊಹೈನ್‌ ಮತ್ತು ನೀಲಮಣಿ ಪೂಕಾನ್‌ ಅವರುಗಳು ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿನ ಗಣನೀಯ ಸೇವೆ ಸಲ್ಲಿಸಿದ ರಾಷ್ಟ್ರಮಟ್ಟದ ಸಾಹಿತಿಗಳನ್ನು ಪುರಸ್ಕರಿಸುವ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಈ ಬಾರಿ ಇಬ್ಬರು ಅಸ್ಸಾಮಿಸಾಹಿತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪ್ರತಿಷ್ಠಾನದ ಸಹ ಕಾರ್ಯದರ್ಶಿ ಕಡಿದಾಳ್‌ ಪ್ರಕಾಶ್‌ ತಿಳಿಸಿದರು.
ಪ್ರಶಸ್ತಿಯು 2.50 ಲಕ್ಷ ರೂ.ನಗದು, ಸ್ಮರಣಿಕೆಯನ್ನು ಒಳಗೊಂಡಿದ್ದು ಹಿರಿಯ ಸಾಹಿತಿಗಳು ಗೌಹಾಟಿಯಿಂದ ಆಗಮಿಸಲು ಅವರ ಆರೋಗ್ಯ ಹಾಗೂ ವಯಸ್ಸಿನ ಕಾರಣಕ್ಕೆ ಸಾದ್ಯವಾಗುತ್ತಿಲ್ಲ. ಹೀಗಾಗಿ ಡಿ.29ರಂದು ಕುಪ್ಪಳ್ಳಿಯಲ್ಲಿ ನಡೆಯುವ ಕುವೆಂಪು ಅವರ 113ನೇ ಜಯಂತಿಯ ಬದಲು ಗೌಹಾಟಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುತ್ತಿದೆ.
ನೀಲಮಣಿ ಪೂಕಾನ್‌
ವೃತ್ತಿಯಲ್ಲಿ ಪ್ರಾಧ್ಯಾಪಕ, ಶಿಕ್ಷಣತಜ್ಞ ಆಗಿರುವ ನೀಲಮಣಿ ಪೂಕಾನ್‌ ಅಸ್ಸಾಮಿ ಸಾಹಿತ್ಯದಲ್ಲಿ ಮಹತ್ವದ, ಸ್ಥಾನ ಹೊಂದಿದ್ದಾರೆ. 1950ರಿಂದ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಇವರು ಜಪಾನೀ ಮತ್ತು ಯುರೋಪಿಯನ್‌ ಕವಿತೆಗಳ ಅನುವಾದ ಮಾಡಿದ್ದಾರೆ. ಇವರ 'ಕೋಬಿತಾ; ಕವನಸಂಕಲನಕ್ಕೆ 1981ರ ಸಾಲಿನ  ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿತ್ತು.
ಹೊಮೆನ್‌ ಬೋರ್ಗೊಹೈನ್‌ 
ಹೊಮೆನ್‌ ಬೋರ್ಗೋಹೈನ್‌ ಅವರು ಶಿಕ್ಷಕರಾಗಿ, ಪತ್ರಕರ್ತರಾಗಿ ಯಶಸ್ವಿಯಾಗಿದ್ದು ಸಾಹಿತ್ಯ ಕ್ಷೇತ್ರದಲ್ಲಿಸಹ ಅಪಾರ ಯಶಸ್ಸು ಸಂಪಾದಿಸಿದ್ದಾರೆ.  ಸಮಾಜದ ಎಲ್ಲ ವರ್ಗದವರನ್ನು ಒಳಗೊಂಡಿರುವ ಇವರ ರಚನೆಗಳು ಮಾನವೀಯ ಮೌಲ್ಯ, ನೈತಿಕತೆ, ವೈಚಾರಿಕತೆಯನ್ನು ತನ್ನಲ್ಲಿ ಅಡಕವಾಗಿಸಿಕೊಂಡಿದೆ. ಸ್ವಂತ ಬದುಕಿನ ಅನುಭವದ ಹಿನ್ನೆಲೆಯಲ್ಲಿ ಮೂಡಿದ ಅವರ ಸಾಹಿತ್ಯ ಕೃತಿಗಳು ಅಸ್ಸಾಂನ ಜನಮಾನಸಗಳಲ್ಲಿ ಸಾಕಷ್ಟು ಹೆಸರಾಗಿವೆ. ಇವರ 'ಪಿತಪುತ್ರ' ಕಾದಂಬರಿಗೆ 978ರಲ್ಲಿ  ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾ

SCROLL FOR NEXT